ರಾಮೇಶ್ವರಂ ಕೆಫೆ ಕೇಸ್: ಬೆಂಗಳೂರಿನಲ್ಲಿ ಇಬ್ಬರು NIA ವಶಕ್ಕೆ

ರಾಮೇಶ್ವರಂ ಕೆಫೆ ಕೇಸ್: ಬೆಂಗಳೂರಿನಲ್ಲಿ ಇಬ್ಬರು NIA ವಶಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್​ 1 ರಂದು ಬಾಂಬ್ ಬ್ಲಾಸ್ಟ್ ಸಂಭವಿಸಿತ್ತು. ಪ್ರಕರಣ ತನಿಖೆಯನ್ನು ಎನ್​ಐಎಗೆ ವಹಿಸಲಾಗಿದ್ದು,  ಪ್ರಕರಣ ತನಿಖೆ ನಡೆಸುತ್ತಿರುವ ಎನ್​ಐಎ ಅಧಿಕಾರಿಗಳು, ಆರೋಪಿ ಬಂಧನಕ್ಕೆ ಶೋಧಕಾರ್ಯ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಮಾರ್ಚ್ 13 ರಂದು ಎನ್​ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ಶಬ್ಬೀರ್ ಎಂಬಾತನನ್ನು ಬಂಧಿಸಿದ್ದರು.

ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರನ್ನು NIA ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಶನಿವಾರ ಸಂಜೆಯೇ NIA ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು,  ವಶಕ್ಕೆ ಪಡೆದ ಇಬ್ಬರು ಸಹ ಬಾಂಬರ್​ ಜೊತೆ ನೇರ ಸಂಪರ್ಕದಲ್ಲಿದ್ದರು ಎಂಬುವುದು ತನಿಖೆಯಲ್ಲಿ ತಿಳಿದು ಬಂದಿದೆ. ಸದ್ಯ ಇಬ್ಬರನ್ನು ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos