ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ: ಪ್ರಮುಖ ಆರೋಪಿಗಳ ಬಂಧನ

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ: ಪ್ರಮುಖ ಆರೋಪಿಗಳ ಬಂಧನ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಜನಪ್ರಿಯ ರೆಸ್ಟೋರೆಂಟ್ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ಸಂಭವಿಸಿದ ಸ್ಫೋಟ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎನ್‌ಐಎ ಶಂಕಿತ ಆರೋಪಿಗಳನ್ನು ಪತ್ತೆ ಹಚ್ಚುತ್ತಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ  ಪ್ರಕರಣಕ್ಕೆ ಸಂಬಂಧಿಸಿದಂತೆ  ರಾಷ್ಟ್ರೀಯ ತನಿಖಾ ದಳ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದೆ. ಹಲವಾರು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನ ಎನ್ಐಎ ತಂಡವು  ಬಂಧಿಸಿದೆ. ಪಶ್ಚಿಮ ಬಂಗಾಳದಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಮುಖ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos