ಬೆಂಗಳೂರು, ಮೇ. 2, ನ್ಯೂಸ್ ಎಕ್ಸ್ ಪ್ರೆಸ್: ಹಿರಿಯ ನಟ – ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಇಂದು ವಿಧಿವಶರಾಗಿದ್ದಾರೆ. 85 ವರ್ಷದ ಹಿರಣ್ಣಯ್ಯ ರಂಗ ಕಲಾವಿದರಾಗಿ ಮಾತ್ರವಲ್ಲದೆ ಸಿನಿಮಾಗಳಲ್ಲಿ ಅಭಿನಯಿಸಿದ್ದ ಮಾಸ್ಟರ್ ಹಿರಣ್ಣಯ್ಯ ತಮ್ಮ ವಿಡಂಬನಾತ್ಮಕ ನಾಟಕಗಳಿಂದಲೇ ಖ್ಯಾತರಾಗಿದ್ದರು.
ಮೈಸೂರು ಮೂಲದ ಹಿರಣ್ಣಯ್ಯನವರು ತಮ್ಮ ನಾಟಕಗಳ ಮೂಲಕವೇ ಭ್ರಷ್ಟ ರಾಜಕಾರಣಿಗಳ ವಿರುದ್ಧ ಛಾಟಿ ಬೀಸುತ್ತಿದ್ದು, ಈ ಕಾರಣಕ್ಕಾಗಿ ಅವರು ಹಲವು ಸಮಸ್ಯೆಗಳನ್ನು ಎದುರಿಸಿದ್ದರು.
ಹಿರಣ್ಣಯ್ಯನವರು ‘ಲಂಚಾವತಾರ’ ನಾಟಕದ ಮೂಲಕ ಕರ್ನಾಟಕದಲ್ಲಿ ಮನೆ ಮಾತಾಗಿದ್ದು, ಅಪಾರ ಜನಪ್ರಿಯತೆ ಗಳಿಸಿದ್ದರು.