ರಂಗೇರಿದ ಶರತ್ ಬಚ್ಚೇಗೌಡರ ಪ್ರಚಾರದ ಅಬ್ಬರ

ರಂಗೇರಿದ ಶರತ್ ಬಚ್ಚೇಗೌಡರ ಪ್ರಚಾರದ ಅಬ್ಬರ

ಹೊಸಕೋಟೆ, ನ. 29: ಭಿಮಾನದ ಹೋರಟಕ್ಕೆ ಅಭೂತಪೂರ್ವ ಬೆಂಬಲ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಜನತೆಯ ಸ್ವಾಭಿಮಾನದ ಹೋರಾಟಕ್ಕೆ ಬೂತ್ ಮಟ್ಟದ ಕಾರ್ಯಕರ್ತರಿಂದ ಹಿಡಿದು ಮಹಿಳೆಯರವರೆಗೂ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಸ್ವತಂತ್ರ ಅಭ್ಯರ್ಥಿ ಶರತ್ ಬಚ್ಚೆಗೌಡ ತಿಳಿಸಿದರು.

ಇಂದು ಸೇಬಿನ ಹಾರ ಮತ್ತು ತುಳಸಿ ಹಾರ ಹಾಕಿ ಸ್ವಾಗತಿಸುತ್ತಿರುವ ಮತದಾರರು. ಹೊಸಕೋಟೆ ತಾಲೂಕಿನ ಚಿಕ್ಕನಲ್ಲೂರಹಳ್ಖಿಯಲ್ಲಿ 30 ಅಡಿ ಎತ್ತರದ ತುಳಸಿ ಹಾರ ಸ್ವಾಗತಿಸಿದರೇ ಮಲೆಮಾಕಿನಪುರದಲ್ಲಿ ಬೃಹತ್ ಸೇಬಿನ ಹಾರ ಹಾಕಿ ಸ್ವಾಗತಿಸಿದರು. ಇತ್ತೀಚಿನ‌ ದಿನಗಳಲ್ಲಿ ರಾಜಕೀಯ ನಾಯಕರಿಗೆ ಬೃಹತ್ ಸೇಬಿನ ಹಾರಗಳನ್ನು ಹಾಕವುದು ಟ್ರೇಂಡ್ ಹಾಗಿದೆ‌. ದೊಡ್ಡ ದೊಡ್ಡ ಪಕ್ಷಗಳಿಗೆ ಸೀಮಿತವಾಗಿದ್ದ ಬೃಹತ್ ಹಾರಗಳು ಇದೀಗ ಪಕ್ಷೇತರ ಅಭ್ಯರ್ಥಿಗಳಿಗೂ ಹಾಕಲಾಗುತ್ತಿದೆ.

ವಿಶೇಷವಾಗಿ ತುಳಸಿ ಬೃಹತ್ ಹಾರ ಎಲ್ಲರನ್ನು ಆಕರ್ಷಿಸಿತು. ಶರತ್ ಬಚ್ಚೇಗೌಡರು ತಾಲೂಕಿನಾಧ್ಯಂತ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos