ರಂಗೇರಿದ ಮಂಡ್ಯ ರಾಜಕೀಯ

ರಂಗೇರಿದ ಮಂಡ್ಯ ರಾಜಕೀಯ

ಬೆಂಗಳೂರು, ಮಾ.11, ನ್ಯೂಸ್ ಎಕ್ಸ್ ಪ್ರೆಸ್: ಮುಂಬರು ಮಂಡ್ಯ ಲೋಕಸಭೆ ಚುನಾವಣಾಯಲ್ಲಿ ಸುಮಲತಾ ಅಂಬರೀಶ್ ಕಣಕ್ಕಿಳಿಯುವುದು ಸ್ಪಷ್ಟವಾಗುತ್ತಿದ್ದಂತೆ ರಾಜ್ಯದಲ್ಲಷ್ಟೇ ಅಲ್ಲದೆ ದೇಶದಲ್ಲೇ ಬಹುಚರ್ಚಿತ ಕ್ಷೇತ್ರವಾಗಿದ್ದು, ಕಾಂಗ್ರೆಸ್ ನಾಯಕರು ಜೆಡಿಎಸ್ ಅಭ್ಯರ್ಥಿಯನ್ನೇ ಬೆಂಬಲಿಸಬೇಕೆಂದು ಸ್ಪಷ್ಟ ಸೂಚನೆ ನೀಡಿದ್ದಾರೆ.

ಮಂಡ್ಯದಲ್ಲಿ ಸುಮಲತಾ ಅವರು ಸ್ಪರ್ಧಿಸದಂತೆ ಮನವೊಲಿಸುವ ಜವಾಬ್ದಾರಿಯನ್ನು ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ರವರಿಗೆ ವಹಿಸಲಾಗಿತ್ತು. ಆದರೆ, ಸುಮಲತಾ ಅವರು ಯಾರ ಮಾತಿಗೂ ಸೊಪ್ಪು ಹಾಕದೆ ತಾವು ಸ್ಪರ್ಧೆ ಮಾಡುವುದು ಖಚಿತ ಎಂಬ ಸಂದೇಶ ನೀಡಿದ್ದಾರೆ.

ಇಂದು ಸಾಮಾಜಿಕ ಜಾಲತಾಣದಲ್ಲಿ ಖಾತೆ ತೆರೆಯುವ ಮೂಲಕ ಮಂಡ್ಯ ಜನರ ಜತೆ ಸಾಮಾಜಿಕ ಜಾಲತಾಣದಲ್ಲೂ ಸಂಪರ್ಕದಲ್ಲಿರುತ್ತೇನೆ ಎಂದು ಘೋಷಿಸಿದ್ದಾರೆ.

ಸುಮಲತಾ ಅವರು ಪಟ್ಟು ಸಡಿಲಸದ ಹಿನ್ನೆಲೆಯಲ್ಲಿ ಮಾ.10ರಂದು ಸಚಿವ ಡಿ.ಕೆ.ಶಿವಕುಮಾರ್ ಮಂಡ್ಯ ಜಿಲ್ಲೆಯ ಕಾಂಗ್ರೆಸ್ ನಾಯಕರ ಸಭೆ ನಡೆಸಿದರು. ಸಭೆಯಲ್ಲಿ ಮಂಡ್ಯ ಜಿಲ್ಲೆಯ ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ ಸೇರಿದಂತೆ 50ಕ್ಕೂ ಹೆಚ್ಚಿನ ಮುಖಂಡರು ಭಾಗವಹಿಸಿದ್ದರು.

ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡುವ ಬಗ್ಗೆ ಎಲ್ಲಾ ನಾಯಕರು ಅಸಮಾಧಾನ ವ್ಯಕ್ತಪಡಿಸಿದರು. ಆದರೆ, ರಾಜಕೀಯ ಹೊಂದಾಣಿಕೆಯಲ್ಲಿ ಕೊಟ್ಟು-ತೆಗೆದುಕೊಳ್ಳುವುದು ಅನಿವಾರ್ಯ ಎಂದು ಡಿ.ಕೆ.ಶಿವಕುಮಾರ್ ಮನವೊಲಿಸಿದ್ದು, ಮೈತ್ರಿ ಸರ್ಕಾರದ ಭದ್ರತೆಗಾಗಿ ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನೇ ಬೆಂಬಲಿಸಬೇಕೆಂದು ಹೈಕಮಾಂಡ್ನ ಸೂಚನೆಯಾಗಿದೆ.

ಇದಕ್ಕಾಗಿ ಜಿಲ್ಲೆಯ ನಾಯಕರು ಈ ಬಾರಿ ಮೈತ್ರಿಯ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಡಿಕೆಶಿ ಮನವಿ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos