ಬೆಂಗಳೂರು, ಅ.24 : ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚಿ ಸರಿಪಡಿಸಿ ಎಂದು ವಿನೂತನವಾಗಿ ಪ್ರತಿಭಟನೆ ನಡೆಸಿದರು. ನಾಯಂಡಹಳ್ಳಿ ಜಂಕ್ಷನ್ ಬಳಿ ಕನ್ನಡ ಪರ ಸಂಘಟನೆಗಳು ರಸ್ತೆ ಗುಂಡಿಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮೇಯರ್ ಗೌತಮ್ಕುಮಾರ್, ಆಯುಕ್ತ ಅನಿಲ್ಕುಮಾರ್ ಪೋಟೋಗಳನ್ನು ಇಟ್ಟು ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರತಿಭಟನೆ ನಡೆಸಿ, ಸರ್ಕಾರ ಹಾಗೂ ಬಿಬಿಎಂಪಿ ವಿರುದ್ಧ ಘೋಷಣೆ ಕೂಗಿದರು.
ಕೂಡಲೇ ಬಿಬಿಎಂಪಿ ರಸ್ತೆ ಗುಂಡಿಗಳನ್ನು ಮುಚ್ಚದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಹಲವಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಮತ್ತೆ ಇಂತಹ ಘಟನೆಗಳು ನಡೆಯಬಾರದು. ಬಿಬಿಎಂಪಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕೆಂದು ಅವರು ಹೇಳಿದ್ದಾರೆ.