“ರಸ್ತೆಯಲ್ಲಿಯೇ ನನ್ನನ್ನು ನೇಣಿಗೆ ಹಾಕಿ’’

“ರಸ್ತೆಯಲ್ಲಿಯೇ ನನ್ನನ್ನು ನೇಣಿಗೆ ಹಾಕಿ’’

ತುಮಕೂರು, ಅ. 24 : ಕುರುಬ ಸಮಾಜವನ್ನು ನಾನು ಅವಮಾನಿಸಿದ್ದರೆ ನಡು ರಸ್ತೆಯಲ್ಲಿಯೇ ನನ್ನನ್ನು ನೇಣಿಗೆ ಹಾಕಲಿ ಇಲ್ಲದಿದ್ದರೆ ಯಾವ ಶಿಕ್ಷೆ ಅನುಭವಿಸಲು ಸಿದ್ಧರಿದ್ದೀರಿ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಪ್ರತಿಭಟನಾಕಾರರಿಗೆ ಸವಾಲು ಹಾಕಿದ್ದಾರೆ.
ನಿನ್ನೆ ನಗರದಲ್ಲಿ ಕುರುಬ ಸಮಾಜದವರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಾವರ್ಕರ್ಗೆ ಭಾರತ ರತ್ನ ಕೊಡುವ ವಿಚಾರವಾಗಿ ಸಿದ್ದರಾಮಯ್ಯ ವಿರುದ್ಧ ಸೊಗಡು ಶಿವಣ್ಣ ಅವಹೇಳನವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿ ಪ್ರತಿಕೃತಿ ದಹಿಸಿದ್ದರು. ಈ ಹಿನ್ನೆಲೆಯಲ್ಲಿ ಸೊಗಡು ಶಿವಣ್ಣ ಇಂದು ಸುದ್ದಿಗೋಷ್ಠಿ ನಡೆಸಿ ಪ್ರತಿಭಟನಾಕಾರರಿಗೆ ಸವಾಲು ಹಾಕಿದರು. ಐದು ವರ್ಷ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ದೇಶಕ್ಕಾಗಿ ಹೋರಾಟ ಮಾಡಿದವರ ಕುರಿತು ಏಕವಚನದಲ್ಲಿ ಮಾತನಾಡುತ್ತಾರೆ.
ವಿಶ್ವವೇ ಮೆಚ್ಚಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ನರಹಂತಕ ಕರೆದು ಏಕ ವಚನದಲ್ಲಿ ನಿಂದಿಸಿದ್ದಾರೆ. ಸ್ಪೀಕರ್ ಕಾಗೇರಿ ಅವರನ್ನು ಏಕವಚನದಲ್ಲಿ ಮಾತನಾಡಿದ್ದಾರೆ. ಇಂತಹವರನ್ನು ಏನೆಂದು ಕರೆಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos