ಬೆಂಗಳೂರು, ನ. 8 : ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರ 70ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅಪಾರ ಅಭಿಮಾನಿಗಳು , ಆತ್ಮೀಯರು ಕಾರ್ಯಕರ್ತರು ಹೂಗುಚ್ಛ ನೀಡಿ ಅಭಿನಂದಿಸಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಪರಿಷತ್ ವಿರೋಧ ಪಕ್ಷದ ಉಪ ನಾಯಕನ ಸ್ಥಾನ ಅಥವಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ.
ನನಗೆ ಹುದ್ದೆಗಿಂತ ಪಕ್ಷದ ಜವಾಬ್ದಾರಿ ಮುಖ್ಯ ಎಂದು ತಿಳಿಸಿದರು.
ಸಮ ಬಾಳು, ಸಮ ಪಾಲು ಎಂಬ ಸಿದ್ಧಾಂತದ ಮೇಲೆ ನಂಬಿಕೆಯುಳ್ಳ ತಾವು ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ನಿರ್ವಹಿಸುವುದಾಗಿ ಹೇಳಿದರು. ಇಂದಿರಾಗಾಂಧಿ ಹಾಗೂ ದೇವರಾಜ ಅರಸು ಅವರೇ ನಮಗೆ ಆದರ್ಶ.
ಪಕ್ಷ ವಹಿಸಿದ ಜವಾಬ್ದಾರಿಯನ್ನು ಆತ್ಮ ತೃಪ್ತಿಯಿಂದ ನಿರ್ವಹಿಸುವ ಜತೆಗೆ ಹಿರಿಯರ ಆಶೀರ್ವಾದ ಹಾಗೂ ಕಿರಿಯರ ಸಹಕಾರದೊಂದಿಗೆ ಪಕ್ಷ ಸಂಘಟನೆಗೆ ಮುಂದಾಗುವುದಾಗಿ ಹೇಳಿದರು.