ಬೆಂಗಳೂರು, ನ.21: ಅಪಘಾತದಲ್ಲಿ ಮೃತಪಟ್ಟ ಪತ್ರಕರ್ತನ ಕುಟುಂಬಕ್ಕೆ ಸಿಎಂ ಯಡಿಯೂರಪ್ಪ ಅವರು 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಮಂಜುನಾಥ್ ಸಹ್ಯಾದ್ರಿ ಮೃತಪಟ್ಟ ಪತ್ರಕರ್ತ. ಹಾವೇರಿ ಜಿಲ್ಲಾ ವರದಿಗಾರರಾಗಿದ್ದ ಮಂಜುನಾಥ್, ಬುಧುವಾರ ಸಂಜೆ ಕೆಲಸ ಮುಗಿಸಿ ತನ್ನ ಬೈಕಿನಲ್ಲಿ ಹೊಳಲ್ಕೆರೆಯಲ್ಲಿರುವ ತನ್ನ ಸಹೋದರಿ ಮನೆಗೆ ಹೋಗುತ್ತಿದ್ದರು. ಪಿಬಿ ರಸ್ತೆಯ ಕೊಡಗನೂರು ಬಳಿ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಮಂಜುನಾಥ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೂಲತಃ ಶಿವಮೊಗ್ಗ ಜಿಲ್ಲೆಯವರಾಗಿರುವ ಮಂಜುನಾಥ್ ಪತ್ರಿಕೆಯಲ್ಲಿ ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಬೆಂಗಳೂರಿನಿಂದ ವರ್ಗಾವಣೆಯಾಗಿ ಹಾವೇರಿಗೆ ತೆರಳಿದ್ದರು. ಮಂಜುನಾಥ್ ತಮ್ಮ ಪೋಷಕರು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.