ಬೆಂಗಳೂರು, ಡಿ. 17 : ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಶಾಸಕರು ಮುಖ್ಯಮಂತ್ರಿ ಬಳಿ ನಿರಂತರ ಲಾಬಿ ನಡೆಸುತ್ತಿದ್ದರೆ, ಮತ್ತೊಂದೆಡೆ ಇರುವ ಮೂರು ಡಿಸಿಎಂ ಸ್ಥಾನವನ್ನು ವಜಾಗೊಳಿಸಬೇಕೆಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪನವರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ದುರ್ಬಲವಾಗಿದ್ದರೆ ಮಾತ್ರ ಉಪಮುಖ್ಯಮಂತ್ರಿ ಸ್ಥಾನ ಅಗತ್ಯವಾಗಿರುತ್ತದೆ ಎಂದು ಟಾಂಗ್ ನೀಡಿದರು.