ಬೆಂಗಳೂರು, ಮೇ. 25, ನ್ಯೂಸ್ ಎಕ್ಸ್ ಪ್ರೆಸ್: ಸಚಿವ ಎಚ್.ಡಿ.ರೇವಣ್ಣ, ಭವಾನಿ ರೇವಣ್ಣ ನಿಂಬೆಹಣ್ಣು ಮಂತ್ರ ಮಾಡಿಸಿ ಪಾಪ ದೇವೇಗೌಡರನ್ನೆ ಬಲಿ ತೆಗೆದುಕೊಂಡರು. ರೇವಣ್ಣ ಅವರ ನಿಂಬೆಹಣ್ಣು ಕೊಳೆತು ಹೋಗಿದೆ. ರೇವಣ್ಣರ ನಿಂಬೆಹಣ್ಣಿಗೆ ಮಾಜಿ ಪ್ರಧಾನಿ ದೇವೇಗೌಡರೇ ಬಲಿಯಾಗಿದ್ದಾರೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಬಿ.ಎಸ್.ಯಡಿಯೂರಪ್ಪ ನಿವಾಸದ ಮುಂಭಾಗದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ನೈತಿಕತೆ ಇದ್ದರೆ ಜನಾದೇಶಕ್ಕೆ ಬೆಲೆ ಕೊಟ್ಟು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಮಾಜಿ ಸಿಎಂ ಯಡಿಯೂರಪ್ಪ ಅವರು ದೈವ ಭಕ್ತರು. ನಾಡಿಗೆ ಒಳ್ಳೆಯದಾಗಲಿ ಎಂದು ಹೋಮ-ಹವನ ಮಾಡಿಸಿದರು. ಅದಕ್ಕೆ ಬಿಜೆಪಿಗೆ 25 ಸೀಟು ಬಂದಿತು. ಜೆಡಿಎಸ್ನವರು, ದೇವೇಗೌಡರ ಕುಟುಂಬದವರು ಹಾಗಲ್ಲ. ಜ್ಯೋತಿಷಿಗಳು, ಮಾಟ ಮಂತ್ರದ ಬೆನ್ನು ಹತ್ತಿದ್ದರು ಅದಕ್ಕೆ ಹೀಗಾಗಿದೆ ಎಂದರು