ರಿಸಲ್ಟ್ ಬಳಿಕ ಜೆಡಿಎಸ್ ಗೇಮ್..!

ರಿಸಲ್ಟ್ ಬಳಿಕ ಜೆಡಿಎಸ್ ಗೇಮ್..!

ಬೆಂಗಳೂರು, ಡಿ. 5 : ರಾಜ್ಯ ವಿಧಾನಸಭೆ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಪಕ್ಷದ ಚಟುವಟಿಕೆಗಳನ್ನು ತೀವ್ರಗೊಳಿಸಲು ಜೆಡಿಎಸ್ ತೀರ್ಮಾನಿಸಿದೆ. ಉಪಚುನಾವಣೆ ಪ್ರಚಾರದಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ವರಿಷ್ಠರು, ನಾಯಕರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ಹೀಗಾಗಿ ಇನ್ನೊಂದು ವಾರ ಕಾಲ ಕಾದು ನೋಡುವ ತಂತ್ರವನ್ನು ಅನುಸರಿಸಲಾಗುತ್ತಿದೆ.
ಉಪಚುನಾವಣೆ ಫಲಿತಾಂಶದ ನಂತರ ಪಕ್ಷದ ಮುಂದಿನ ಹೋರಾಟ, ಕಾರ್ಯಕ್ರಮಗಳು, ಸಭೆ-ಸಮಾವೇಶಗಳನ್ನು ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಅಸಮಾಧಾನಗೊಂಡಿರುವ ಪಕ್ಷದ ಕೆಲವು ಮುಖಂಡರು ಸಕ್ರಿಯವಾಗಿ ಪಕ್ಷದ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳುತ್ತಿಲ್ಲ. ಅಂತಹವರ ಮನವೊಲಿಸುವ ಇಲ್ಲವೆ ಶಿಸ್ತುಕ್ರಮ ಕೈಗೊಳ್ಳುವ ಬಗ್ಗೆ ಚುನಾವಣಾ ಫಲಿತಾಂಶದ ಬಗ್ಗೆ ನಿರ್ಧಾರ ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಫ್ರೆಶ್ ನ್ಯೂಸ್

Latest Posts

Featured Videos