ಆದಿವಾಸಿ ಪ್ರದೇಶಗಳಿಗೆ ಶೀಘ್ರದಲ್ಲೇ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಎಚ್ಡಿಕೆ ಭರವಸೆ
ಬೆಂಗಳೂರು: ತ್ರಿಪುರದ ಸಿಪಿಎಂ ಪಕ್ಷದ ಸಂಸದರು ಹಾಗೂ ಆದಿವಾಸಿ ರಾಷ್ಟ್ರೀಯ ಮಂಚ್ನ ರಾಷ್ಟ್ರೀಯ ಸಂಚಾಲಕ ಜಿತೇಂದ್ರ ಚೌಧರಿ ನೇತೃತ್ವದಲ್ಲಿ ಆದಿವಾಸಿ ಸಮನ್ವಯ ಸಮಿತಿಯು ಇಂದು ಆಯೋಜಿಸಿದ್ದ ಆದಿವಾಸಿಗಳ ಸಮಸ್ಯೆಗಳ ಕುರಿತ ಸಭೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಇಂದು ಜರುಗಿತು.
ರಾಜ್ಯದಲ್ಲಿ ನೆಲೆಸಿರುವ ಆದಿವಾಸಿಗಳ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದ್ದು, ಶೀಘ್ರದಲ್ಲಿಯೇ ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಭರವಸೆ ನೀಡಿದರು.
ತ್ರಿಪುರ ಸಂಸದ ಹಾಗೂ ಆದಿವಾಸಿ ರಾಷ್ಟ್ರೀಯ ಮಂಚ್ ನ ರಾಷ್ಟ್ರೀಯ ಸಂಚಾಲಕರಾದ ಜಿತೇಂದ್ರ ಚೌಧರಿ ನೇತೃತ್ವದಲ್ಲಿ ಆದಿವಾಸಿ ಸಮನ್ವಯ ಸಮಿತಿಯು ಇಂದು ಆಯೋಜಿಸಿದ್ದ ಆದಿವಾಸಿಗಳ ಸಮಸ್ಯೆಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅರಣ್ಯ ಹಕ್ಕುಗಳ ಕಾಯ್ದೆ 2006 ಅಂಗೀಕಾರವಾಗಿ 12 ವರ್ಷಗಳು ಕಳೆದಿದ್ದರೂ, ಬಹುತೇಕ ಆದಿವಾಸಿಗಳಿಗೆ ಭೂಮಿಯ ಹಕ್ಕು ಪಡೆಯುವಲ್ಲಿ ಇರುವ ಗೊಂದಲಗಳ ನಿವಾರಣೆ, ಶಿಕ್ಷಣ, ಉದ್ಯೋಗ ಸೇರಿದಂತೆ ಇತರ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸಲು ಸಕಾರಾತ್ಮಕವಾಗಿ ತೀರ್ಮಾನ ಕೈಗೊಳ್ಳಲು ಕಂದಾಯ, ಅರಣ್ಯ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗುವುದು ಎಂದರು.
ಆದಿವಾಸಿ ಸಮನ್ವಯ ಸಮಿತಿಯ ಸಂಚಾಲಕ ವೈ.ಕೆ.ಗಣೇಶ್, ಸಹ ಸಂಚಾಲಕ ಎಸ್. ವೈ. ಗುರುಶಾಂತ್, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಆದಿವಾಸಿ ಸಮನ್ವಯ ಸಮಿತಿಯ ಸಂಚಾಲಕ ವೈ.ಕೆ.ಗಣೇಶ್, ಸಹಸಂಚಾಲಕ ಎಸ್. ವೈ.ಗುರುಶಾಂತ್, ಮುಖಂಡರಾದ ನಿತ್ಯಾನಂದಸ್ವಾಮಿ, ಹನುಮೇಗೌಡ ಮತ್ತಿತರರು ಉಪಸ್ಥಿತರಿದ್ದರು.