ಬೆಂಗಳೂರು: ಆರ್ಟಿಐ ಕಾರ್ಯಕರ್ತನೊಬ್ಬ ತನ್ನ ಮನೆಯಲ್ಲಿ ಮನೆಗೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅಸಭ್ಯ ವರ್ತನೆ ತೋರಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಈ ಘಟನೆ ಪಾಪರೆಡ್ಡಿ ಪಾಳ್ಯ ನಾಗರಭಾವಿ ಬಳಿ ನಡೆದಿದೆ.
ಸಂತ್ರಸ್ತ ಮಹಿಳೆ ಕಷ್ಟ ಇರುವ ಹಿನ್ನೆಲೆ ಆರ್ಟಿಐ ಕಾರ್ಯಕರ್ತ ಜಯಕುಮಾರ್ ಎಂಬಾತನ ಬಳಿ ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಹಾಗಾಗಿ ಜಯಕುಮಾರ್ ಆಕೆಗೆ ಮತ್ತೊಬ್ಬ ಆರ್ಟಿಐ ಕಾರ್ಯಕರ್ತ ಭಾಸ್ಕರನ್ ಎಂಬುವರಿಂದ ಹಣ ಕೊಡಿಸಿದ್ದರು. ಆದ್ರೆ ಮಹಿಳೆ ಹಣವನ್ನು ವಾಪಾಸ್ ನೀಡಿಲ್ಲ ಎಂಬ ಕಾರಣಕ್ಕೆ ಜಯಕುಮಾರ್ ಅವರ ಮನೆಯಲ್ಲಿಯೇ ಕೆಲಸ ಮಾಡುವಂತೆ ಹೇಳಿದ್ದರು.
ಮಹಿಳೆ ಮನೆಯಲ್ಲಿ ಕೆಲಸ ನಿರ್ವಹಿಸುವಾಗ ಆತ ಮೈ ಮುಟ್ಟಿ, ಮಂಚಕ್ಕೆ ಕರೆದು ಅಸಭ್ಯ ವರ್ತನೆ ತೋರಿದ್ದಾನೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾಳೆ. ಸದ್ಯ ನೊಂದ ಮಹಿಳೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.