ರಸ್ತೆ ಒತ್ತುವರಿ ತೆರವು ಕಾರ್ಯಾಚರಣೆ

ರಸ್ತೆ ಒತ್ತುವರಿ ತೆರವು ಕಾರ್ಯಾಚರಣೆ

ಬೆಂಗಳೂರು : ರಸ್ತೆಯ ಎರಡು ಬದಿಗಳಲ್ಲಿ ಪಾದಚಾರಿ ರಸ್ತೆ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದ ಅಂಗಡಿಗಳ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮಹದೇವಪುರ ವಲಯದ ವಾರ್ಡ್-54 ಅಭಿಯಂತರರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಾಚರಣೆಯಲ್ಲಿ ಒಟ್ಟು 16 ತಾತ್ಕಾಲಿಕ ಪಾದಚಾರಿ ರಸ್ತೆ ಒತ್ತುವರಿಗಳನ್ನು ತೆರವುಗೊಳಿಸಲಾಗಿದೆಯೆಂದು ಮಹದೇವಪುರ ವಲಯದ ಮುಖ್ಯ ಅಭಿಯಂತರರಾದ  ಆರ್.ಎಲ್.ಪರಮೇಶ್ವರಯ್ಯ ರವರು ತಿಳಿಸಿದ್ದಾರೆ. ಹಾಗೂ ಪಾದಚಾರಿಗಳ ಸುರಕ್ಷತೆ ಹಿತದೃಷ್ಟಿಯಿಂದ ಒತ್ತುವರಿ ತೆರವಿನ ಕಾರ್ಯಾಚರಣೆಯನ್ನು ಇತರೆ ವಾರ್ಡ್ಗಳಲ್ಲೂ ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos