ಕೊಳೆತ ಮೊಟ್ಟೆ ತಿಂದು 8 ಮಕ್ಕಳು ಅಸ್ವಸ್ಥ

ಕೊಳೆತ ಮೊಟ್ಟೆ ತಿಂದು 8 ಮಕ್ಕಳು ಅಸ್ವಸ್ಥ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಯಲ್ಲಿ ಕಳಪೆ ಮಟ್ಟದ ಊಟದ ವ್ಯವಸ್ಥೆಯಾಗುತ್ತಿದೆ. ಮಧ್ಯಾಹ್ನದ ಊಟ ತಿಂದ 8 ಮಕ್ಕಳು ಅಸ್ವಸ್ಥರಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಯ ಹೊಸಕೋಟೆ ತಾಲೂಕಿನ ನೆಲವಾಗಿಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಿನ್ನೆ ನಡೆದಿದೆ. ಅಸ್ವಸ್ಥತರಾದ 8 ಮಕ್ಕಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಿನ್ನೆ ಮಧ್ಯಾಹ್ನ ಊಟ ಮಾಡಿದ ನಂತರ ವಸತಿ ‌ನಿಲಯದಲ್ಲಿದ್ದ  ಕೆಲ ವಿದ್ಯಾರ್ಥಿಗಳಿಗೆ ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣ ವಸತಿ ನಿಲಯದ ವಾರ್ಡನ್ ವಿದ್ಯಾರ್ಥಿಗಳನ್ನ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಸದ್ಯ ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರೌಢಶಾಲೆಯಲ್ಲಿ ನೀಡಿದ ಕೊಳೆತ ಮೊಟ್ಟೆಯೇ ಕಾರಣ ಅಂತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos