ರೌಡಿಶೀಟರ್ ಬರ್ಬರ ಕೊಲೆ

ರೌಡಿಶೀಟರ್ ಬರ್ಬರ ಕೊಲೆ

ಕಲಬುರಗಿ, . 26, ನ್ಯೂಸ್ ಎಕ್ಸ್ ಪ್ರೆಸ್: ರೌಡಿಶೀಟರ್ವೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿರುವ ಘಟನೆ ಬಬಲಾದ್ ಗ್ರಾಮದಲ್ಲಿ ನಡೆದಿದೆ. ಆನಂದ್ ರಾಮಪೊರೆ (30) ಕೊಲೆಯಾಗಿರುವ ರೌಡಿಶೀಟರ್ ಆಗಿದ್ದು, ಈತ ಕಲಬುರಗಿ ನಗರದ ಕಾಂತಾ ಕಾಲೋನಿ ನಿವಾಸಿಯಾಗಿದ್ದಾನೆ. ಕಳೆದ ರಾತ್ರಿ ರೌಡಿಶೀಟರ್ ಆನಂದ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

ಘಟನೆ ಸಂಬಂಧ ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos