ಸಚಿವ ಸಾ.ರಾ. ಮಹೇಶ್ ಕಾರು ತಡೆದಿದ್ದ ಮುಖ್ಯ ಪೇದೆ ಅಮಾನತು

ಸಚಿವ ಸಾ.ರಾ. ಮಹೇಶ್ ಕಾರು ತಡೆದಿದ್ದ ಮುಖ್ಯ ಪೇದೆ ಅಮಾನತು

ಮೈಸೂರು, ಮಾ. 27, ನ್ಯೂಸ್ ಎಕ್ಸ್ ಪ್ರೆಸ್ : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ. ಮಹೇಶ್ ಅವರ ಕಾರನ್ನು ತಡೆದಿದ್ದ ಮುಖ್ಯ ಪೇದೆಯನ್ನು ಅಮಾನತುಗೊಳಿಸಲಾಗಿದೆ.

ಕುವೆಂಪು ನಗರ ಠಾಣೆಯ ಹೆಡ್ ಕಾನ್ಸ್ ಟೇಬಲ್ ವೆಂಕಟೇಶ ಅಮಾನತಾದ ಪೊಲೀಸ್ ಸಿಬ್ಬಂದಿ, ಜೆಎಲ್ ಬಿ ರಸ್ತೆಯ ಜಂಕ್ಷನ್ ನಲ್ಲಿ ಸಚಿವರ ಕಾರನ್ನು ಜಿಲ್ಲಾಧಿಕಾರಿ ಕಚೇರಿ ಒಳಗೆ ಬಿಡಲು ಸಾಧ್ಯವಿಲ್ಲ ಎಂದು ಹೆಡ್ ಕಾನ್ಸ್ ಟೇಬಲ್ ವೆಂಕಟೇಶ್ ತಡೆದಿದ್ದರು.

ಈ ವೇಳೆ ಸಚಿವರು ಮತ್ತು ಹೆಡ್ ಕಾನ್ಸ್ ಟೇಬಲ್ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ಹಿರಿಯ ಅಧಿಕಾರಿಗಳು ಆಗಮಿಸಿ, ಸಚಿವರ ಕಾರು ಡಿಸಿ ಕಚೇರಿ ಒಳಗೆ ಕಳುಹಿಸಿದ್ದರು.

ಸಚಿವರ ಕಾರನ್ನು ತಡೆದ ಆರೋಪದ ಮೇಲೆ ಹೆಡ್ ಕಾನ್ಸ್ ಟೇಬಲ್ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಸಚಿವರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಹೆಡ್ ಕಾನ್ಸ್ ಟೇಬಲ್ ವೆಂಕಟೇಶ್ ಅವರನ್ನು ಡಿಸಿಪಿ ಮುತ್ತುರಾಜು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos