‘ಸಚಿವ ಶಿವಳ್ಳಿ ಸಾವಿಗೆ ‘ಮೈತ್ರಿ’ ಕಾರಣ’ – ಶ್ರೀರಾಮುಲು

‘ಸಚಿವ ಶಿವಳ್ಳಿ ಸಾವಿಗೆ ‘ಮೈತ್ರಿ’ ಕಾರಣ’ – ಶ್ರೀರಾಮುಲು

ಹುಬ್ಬಳ್ಳಿ, ಮೇ. 9, ನ್ಯೂಸ್ ಎಕ್ಸ್ ಪ್ರೆಸ್: ಇತ್ತೀಚಿಗೆ ನಿಧನರಾದ ಪೌರಾಢಳಿತ ಸಚಿವ ಸಿ.ಎಸ್. ಶಿವಳ್ಳಿ ಅವರ ಸಾವಿಗೆ ‘ಮೈತ್ರಿ’ ಸರ್ಕಾರವೇ ಕಾರಣ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಶ್ರೀ ರಾಮುಲು ವಿರುದ್ದ ಇಂದು ಕಾಂಗ್ರೆಸ್ ನಾಯಕರು ಕುಂದಗೋಳ ಚುನಾವಣಾಧಿಕಾರಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನಲೆಯಲ್ಲಿ ಸಚಿವ ಡಿ.ಕೆ ಶಿವಕುಮಾರ್ ರಾತ್ರೋರಾತ್ರಿ ಸಂಸದ ಉಗ್ರಪ್ಪ ಅವರನ್ನು ಕರೆಸಿಕೊಂಡು ಚರ್ಚೆ ನಡೆಸಿದ್ದಾರೆ. ಶ್ರೀರಾಮುಲು ವಿರುದ್ದ ದೂರು ನೀಡಲು ನಿರ್ಧರಿಸಿದ್ದಾರೆ.

ಶಾಸಕ ಶ್ರೀರಾಮುಲು ಅವರು ಮಾತನಾಡಿ, “ಸಿಎಸ್ ಶಿವಳ್ಳಿ ಒಬ್ಬ ಒಳ್ಳೆಯ ವ್ಯಕ್ತಿ.  ಅವರು ಈಗಿಲ್ಲ. ಆದ್ದರಿಂದ ಅವರ ಬಗ್ಗೆ ನಾನು ಮಾತನಾಡುದಕ್ಕೆ ಇಷ್ಟಪಡುವುದಿಲ್ಲ. ಆದರೆ, ಅವರ ಸಾವಿಗೆ ಈ ಕಾಂಗ್ರೆಸ್ ಮೈತ್ರಿ ಸರ್ಕಾರವೇ ಕಾರಣ ಎಂಬುದು ಸತ್ಯ. ಅವರಿಗೆ ಮೈತ್ರಿ ಸರಕಾರದಲ್ಲಿ ನೀಡಲಾದ ಕಿರುಕುಳ ಮತ್ತು ಹೇರಿದ ಒತ್ತಡದಿಂದಲೇ ಅವರು ಹೃದಯಾಘಾತದಿಂದ ಮೃತರಾಗಿದ್ದಾರೆ ಎಂದು ಮೈತ್ರಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos