ಬೆಂಗಳೂರು,ಅ. 20: ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ವಿರುದ್ಧದ ಸಮರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೂಡ ಮುಂದುವರಿಸಿದ್ದಾರೆ.
ಇಂದು ಟ್ವೀಟ್ ಮಾಡಿರುವ ಮಾಜಿ ಸಿಎಂ, ಕುಡಿದ ಮತ್ತಿನಲ್ಲಿ ಅಪಘಾತ ಮಾಡಿ ಸಾಯಿಸಿದವರ ಬಗ್ಗೆ ಹೇಳಿದರೆ ಸಿಟಿ ರವಿ ಯಾಕೆ ಹೆಗಲು ಮುಟ್ಟಿ ನೋಡಿಕೊಳ್ತಿದ್ದಾರೆ ಎಂದು ಅರ್ಥವಾಗಿಲ್ಲ.
ನಾನು ಒಳ್ಳೆಯ ವಕೀಲರಾಗಿರುವ ಕಾರಣಕ್ಕಾಗಿಯೇ ಆರೋಪಿಯನ್ನು ಹೆಸರಿಸಿಲ್ಲ. ಪ್ರತಿಕ್ರಿಯಿಸುವ ಮೊದಲು ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಅರಿವಿರಲಿ, ನೀವು ಆ ಖಾತೆಯ ಸಚಿವರು ಎಂದು ಬರೆದು ಸಿಟಿ ರವಿಗೆ ಟ್ಯಾಗ್ ಮಾಡಿದ್ದಾರೆ.