ಸದನಕ್ಕೆ ಗೈರಾದ ಕೈ 5 ಶಾಸಕರು

ಸದನಕ್ಕೆ ಗೈರಾದ ಕೈ 5 ಶಾಸಕರು

ಬೆಂಗಳೂರು: ಮೈತ್ರಿ ಸರ್ಕಾರದ ಬಜೆಟ್ ಅಧಿವೇಶನ ಆರಂಭವಾಗಿದ್ದು, ವಿಪ್ ನಡುವೆಯೂ ನಿರೀಕ್ಷೆಯಂತೆ ಕಾಂಗ್ರೆಸ್ಸಿನ ನಾಲ್ವರು ಅತೃಪ್ತ ಶಾಸಕರು ಸೇರಿದಂತೆ ಒಟ್ಟು 5 ಶಾಸಕರು ಅಧಿವೇಶನಕ್ಕೆ ಗೈರು ಹಾಜರಾಗಿದ್ದಾರೆ.

ಶಾಸಕರುಗಳಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ನಾಗೇಂದ್ರ, ಉಮೇಶ್ ಜಾಧವ್ ಹಾಗೂ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿದ ಕಾರಣಕ್ಕೆ ಬಂಧನ ಭೀತಿ ಎದುರಿಸುತ್ತಿರುವ ಜೆ.ಎನ್. ಗಣೇಶ್ ಸದನಕ್ಕೆ ಗೈರು ಹಾಜರಾಗಿದ್ದಾರೆ.

ಈ ಪೈಕಿ ರಮೇಶ್ ಜಾರಕಿಹೊಳಿ ತಾವು ಸದನಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ವಿಧಾನಸಭೆಯ ಸ್ಪೀಕರ್ ಅವರಿಗೆ ಪತ್ರ ರವಾನಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos