ಚುನಾವಣಾ ಕಣಕ್ಕಿಳಿಯಲಿದ್ದಾರಾ ಸಂಜಯ್ ದತ್

ಚುನಾವಣಾ ಕಣಕ್ಕಿಳಿಯಲಿದ್ದಾರಾ ಸಂಜಯ್ ದತ್

ಘಾಜಿಯಾಬಾದ್, ಮಾ.16, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭೆ ಚುನಾವಣೆಯ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳಲ್ಲಿ ಭರ್ಜರಿ ತಯಾರಿ ನಡೆದಿದೆ.

ಪ್ರತಿ ಪಕ್ಷದಲ್ಲೂ ಪ್ರಬಲ ವ್ಯಕ್ತಿಗಳನ್ನು ಚುನಾವಣಾ ಕಣಕ್ಕಿಳಿಸುವ ಪ್ರಯತ್ನದಲ್ಲಿದೆ. ಬಾಲಿವುಡ್, ಸ್ಯಾಂಡಲ್ ವುಡ್, ಕ್ರಿಕೆಟ್ ಸೇರಿದಂತೆ ಚಿತ್ರಜಗತ್ತಿನ ಕಲಾವಿದರು ಚುನಾವಣಾ ಕಣಕ್ಕಿಳಿಯಲು ಮುಂದಾಗಿದ್ದಾರೆ.

ಬಾಲಿವುಡ್ ಬಾಬಾ ಅಲಿಯಾಸ್ ಸಂಜಯ್ ದತ್ ಕೂಡ ಘಾಜಿಯಾಬಾದ್ ನಿಂದ ಚುನಾವಣಾ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಸಂಜಯ್ ದತ್, ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಗೆ ಟಕ್ಕರ್ ನೀಡುವ ಸಾಧ್ಯತೆ ಹೆಚ್ಚಿದೆ. ಸಂಜಯ್ ದತ್ ಚುನಾವಣೆಗೆ ಧುಮುಕಲು ಪ್ರಯತ್ನಿಸುತ್ತಿರುವುದು ಇದೇ ಮೊದಲಲ್ಲ.

2009ರಲ್ಲಿಯೂ ಸಮಾಜವಾದಿ ಪಕ್ಷದಿಂದ ಚುನಾವಣಾ ಕಣಕ್ಕಿಳಿಯುವ ಪ್ರಯತ್ನ ನಡೆಸಿದ್ದರು. ಆದರೆ, ಕೋರ್ಟ್ ಅವರಿಗೆ ಅಡ್ಡಿಯುಂಟು ಮಾಡಿತ್ತು.

ಕುಮಾರ್ ವಿಶ್ವಾಸ್, ಕಾಂಗ್ರೆಸ್ ಪಕ್ಷದಿಂದ ಚುನಾವಣೆ ಕಣಕ್ಕಿಳಿದರೆ, ಎಸ್ಪಿ-ಬಿಎಸ್ಪಿ ಮೈತ್ರಿ, ಸಂಜಯ್ ದತ್ ಗೆ ಟಿಕೆಟ್ ನೀಡುವ ಸಾಧ್ಯತೆಯಿದೆ. ಸಂಜಯ್ ದತ್ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಫ್ರೆಶ್ ನ್ಯೂಸ್

Latest Posts

Featured Videos