ಸಂತೋಷ್ ಭೇಟಿ ಬಳಿಕ ಶ್ರೀರಾಮುಲು ಪ್ರತಿಕ್ರಿಯೆ

ಸಂತೋಷ್ ಭೇಟಿ ಬಳಿಕ ಶ್ರೀರಾಮುಲು ಪ್ರತಿಕ್ರಿಯೆ

ಬೆಂಗಳೂರು, ಡಿ. 16 : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿ ಮಾಡುವ ಸಲುವಾಗಿ ಕಚೇರಿಗೆ ಬಂದಿದ್ದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಸೋಮವಾರ ಹೇಳಿದರು.
ನಗರದಲ್ಲಿಂದು ಬಿ.ಎಲ್ ಸಂತೋಷ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ವಿಚಾರಗಳು ಸತ್ಯಕ್ಕೆ ದೂರವಾಗಿದ್ದು, ಪಕ್ಷದ ಸಲುವಾಗಿ ರಾಜ್ಯದ ಜನರಿಗೆ ಒಳ್ಳೆಯ ಕೆಲಸ ಮಾಡುತ್ತೇವೆ ಎಂದರು.
ಇನ್ನು ಬಿಜೆಪಿಯಲ್ಲಿ ಸ್ಥಾನ-ಮಾನಕ್ಕಾಗಿ ಹೋರಾಟ ಮಾಡಿದ ಜನ ನಾವಲ್ಲ. ನಮ್ಮ ಇಲಾಖೆಯಲ್ಲಿ ನಾವು ಸಕ್ರೀಯವಾಗಿದ್ದೇವೆ. ಯಾವುದೇ ಖಾತೆಯಲ್ಲಿ ಅಪೇಕ್ಷೆ ಪಟ್ಟವನು ನಾನಲ್ಲ ಎಂದು ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos