ಸಂತ್ರಸ್ಥರ ನೋವಿಗೆ ನಿಂತ : ಸುಧಾಮೂರ್ತಿ

ಸಂತ್ರಸ್ಥರ ನೋವಿಗೆ ನಿಂತ : ಸುಧಾಮೂರ್ತಿ

ಗದಗ, ಆ. 30 : ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರು ಪ್ರವಾಹಕ್ಕೊಳಗಾದ ಜಿಲ್ಲೆಯ ಕೊಣ್ಣೂರ ಗ್ರಾಮಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ. ಜೊತೆಗೆ ಸಂತ್ರಸ್ತರ ನೋವಿಗೆ ಸ್ಪಂದಿಸುವುದಾಗಿ ಹೇಳಿದರು.
ಗದಗ ಜಿಲ್ಲೆಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನೆರೆ ಸಂತ್ರಸ್ತರಿಗೆ ಸರ್ಕಾರ ಚೆನ್ನಾಗಿ ವ್ಯವಸ್ಥೆ ಮಾಡಿದೆ. ಈಗಾಗಲೇ ನಾವು ಸುಮಾರು 5 ಕೋಟಿ ರೂ. ಸಾಮಾಗ್ರಿಗಳನ್ನು ಕರ್ನಾಟಕದಾದ್ಯಂತ ವಿತರಿಸಿದ್ದೇವೆ. ಸರ್ಕಾರ ಜಾಗ ತೋರಿಸಿದರೆ ನಾವು ಮನೆ ಕಟ್ಟಿ ಕೊಡುತ್ತೇವೆ. ಒಂದು ಮನೆಗೆ ಸುಮಾರು 10 ಲಕ್ಷ ರೂ. ಖರ್ಚು ಬರುತ್ತದೆ. ಆದ್ದರಿಂದ ಸರ್ಕಾರ ಈ ಜಾಗ ಇವರದ್ದು ಎಂದು ತೋರಿಸಿದರೆ ನಾವು ಕಟ್ಟಿಸಿಕೊಡುತ್ತೇವೆ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos