ಮೈತ್ರಿ ಸರ್ಕಾರ ಕೋಮಾ ಸ್ಥಿತಿ ತಲುಪಿದೆ: ಬಿ.ಎಸ್.ವೈ

ಮೈತ್ರಿ ಸರ್ಕಾರ ಕೋಮಾ ಸ್ಥಿತಿ ತಲುಪಿದೆ: ಬಿ.ಎಸ್.ವೈ

ಹುಬ್ಬಳ್ಳಿ, ಏ. 12, ನ್ಯೂಸ್ ಎಕ್ಸ್ ಪ್ರೆಸ್: ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಕೋಮಾ ಸ್ಥಿತಿಯಲ್ಲಿದ್ದು, ದೇಶಕ್ಕೆ ಸುಭದ್ರ ಸರ್ಕಾರ ಬೇಕೋ, ಭ್ರಷ್ಟಾಚಾರದ ಸರ್ಕಾರ ಬೇಕೋ ಜನರೇ ತೀರ್ಮಾನ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ದೇಶದ ಅಭಿವೃದ್ಧಿಗೆ ಕಂಕಣ ಬದ್ಧರಾಗಿದ್ದಾರೆ. ಮೋದಿ ಅವರು ಅನೇಕ ಜನಪರ ಯೋಜನೆಗಳನ್ನು ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 22 ಕ್ಕೂ ಹೆಚ್ಚು ಸೀಟು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪುಲ್ವಾಮಾ ದಾಳಿಯ ಬಗ್ಗೆ ನನಗೆ ಮೊದಲೇ ಗೊತ್ತಿತ್ತು ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಇದು ಕುಮಾರಸ್ವಾಮಿ ಅವರ ನೈತಿಕ ಅಧಃ ಪತನ. ಸರ್ಕಾರದ ಆಯಸ್ಸು ಮುಗಿತಾ ಬಂದಿದೆ. ರಾಜ್ಯ ಸರ್ಕಾರ ಸದ್ಯ ಐಸಿಯುನಲ್ಲಿದ್ದು, ಕೋಮಾ ಸ್ಥಿತಿಯನ್ನು ತಲುಪಿದೆ ಎಂದು ವ್ಯಂಗ್ಯವಾಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos