ಹೊಸಕೋಟೆ, ನ. 14: ಹೊಸಕೋಟೆಯಲ್ಲಿ ಉಪಚುನಾವಣೆ ಕಣ ರಂಗೇರಿದ್ದು, ಇಂದು ಹೊಸಕೋಟೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಶರತ್ ಬಚ್ಚೇಗೌಡ ನಾಮಪತ್ರ ಸಲ್ಲಿಸಲಿದ್ದಾರೆ.
ಹೊಸಕೋಟೆಯಲ್ಲಿ ಕಾರ್ಯಕರ್ತರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಶರತ್ ಬಚ್ಚೇಗೌಡ, ರಾಜ್ಯ ಬಿಜೆಪಿಯ ಯಾವೊಬ್ಬ ನಾಯಕರು ತಮ್ಮನ್ನು ಭೇಟಿ ಮಾಡಿಲ್ಲ. ಡಿಸಿಎಂ ಅಶ್ವಥ್ ನಾರಾಯಣ್ ನಮ್ಮನ್ನು ವೈಯಕ್ತಿವಾಗಿ ಕರೆದು ಮಾತನಾಡಿಸಿಲ್ಲ. ಹೊಸಕೋಟೆ ಉಪಚುನಾವಣೆಯಲ್ಲಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದು, ಇಂದು ನಾನು ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ.