ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವುದು ಖಚಿತ: ಸತೀಶ್‌ ರೆಡ್ಡಿ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವುದು ಖಚಿತ: ಸತೀಶ್‌ ರೆಡ್ಡಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಮೊದಲನೇ ಹಂತದ ಮತದಾನದಲ್ಲಿ ತೊಡಗಿದ್ದು, 14 ಲೋಕಸಭಾ ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ರಾಜ್ಯದಲ್ಲಿ ಭರ್ಜರಿಯಾಗಿ ಎಲ್ಲರೂ ಬಂದು ಮತ ಚಲಾಯಿಸುತ್ತಿದ್ದಾರೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸತೀಶ್‌ ರೆಡ್ಡಿ ಅವರು ಮತ ಚಲಾಯಿಸಿ ಈ ಸಂದರ್ಭದಲ್ಲಿ ಮಾತನಾಡಿದರು.

ಇಂದು ಬೆಳಗ್ಗೆ 7 ಗಂಟೆಯಿಂದಲೇ ಎಲ್ಲರೂ ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ. ಈ ದೇಶದಲ್ಲಿ ಮತ್ತೆ ಮೋದಿಯವರು ಪ್ರಧಾನಿ ಮಂತ್ರಿ ಆಗಬೇಕೆಂದು ಜನ ಆಶಿಸುತ್ತಿದ್ದಾರೆ. ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಮೂರಕ್ಕೆ ಮೂರು ಸಹ ಬಿಜೆಪಿ ಗೆಲುವು ಸಾಧಿಸುವುದು ಖಚಿತವಾಗಿದೆ ಎಂದು ಸತೀಶ್ ರೆಡ್ಡಿ ಹೇಳಿದರು.

ವಿಶೇಷವಾಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅತಿ ಹೆಚ್ಚು ಮತದ ಅಂತರದಿಂದ ತೇಜಸ್ವಿ ಸೂರ್ಯ ಅವರು ಗೆಲುವು ಸಾಧಿಸುತ್ತಾರೆ. ಕಳೆದ ಐದು ವರ್ಷಗಳಿಂದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ನಾನು ಹಾಗೂ ತೇಜಸ್ವಿ ಸೂರ್ಯ ಅವರು ಒಟ್ಟಿಗೆ ಸೇರಿ ಮಾಡಿರುವಂತಹ ಅಭಿವೃದ್ಧಿ ಕೆಲಸಗಳಿಂದ ತೇಜಸ್ವಿ ಸೂರ್ಯ ಅವರು ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ಕಾಂಗ್ರೆಸ್ ಪಕ್ಷ ಮತದಾರರನ್ನು ಸೆಳೆಯಲು ಹಿಂಬದಿಯಿಂದ ಬಂದು ಹಣ ಹಂಚುವುದು ಸಾರಾಯಿ ಕೊಡುವುದು ಇವೆಲ್ಲ ಮಾಡ್ತಾ ಇದ್ದಾರೆ, ಇದು ಕಾಂಗ್ರೆಸ್ಗೆ ಶೋಭೆ ತರುವಂತಹ ಕೆಲಸವಲ್ಲ ಎಂದು ಸತೀಶ್ ರೆಡ್ಡಿ ಕಿರಿಕರಿದ್ದಾರೆ.

ಒಂದು ಮಾತ್ರ ನೆನಪಿನಲ್ಲಿಟ್ಟುಕೊಳ್ಳಿ, ಎಷ್ಟು ಕೋಟಿ ಹಣ ಕೊಟ್ರು ಸಹ ಬಿಜೆಪಿ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುವುದು ಅನುಮಾನವಿಲ್ಲ, ದುಡ್ಡಿರುವುದನ್ನು ಕೊಡಲಿ ಯಾವುದು ಅಕ್ರಮವಾಗಿ ಮಾಡಿರುವುದನ್ನೇಲ್ಲಾ ಕಕ್ಕಲಿ ಎಂದು ಈ ಸಂದರ್ಭದಲ್ಲಿ ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos