ಬೆಂಗಳೂರು, ಏ. 5, ನ್ಯೂಸ್ ಎಕ್ಸ್ ಪ್ರೆಸ್: ಬೆಂಗಳೂರು ದಕ್ಷಿಣ ಲೋಕಸಭಾ ಬಿಜೆಪಿ ಅಭ್ಯರ್ಥಿ ತೇಜಸ್ವಿಸೂರ್ಯರ ಪರವಾಗಿ ಸ್ಥಳೀಯ ಬೊಮ್ಮನಹಳ್ಳಿ ಜನಪ್ರಿಯ ಶಾಸಕ ಎಂ. ಸತೀಶ್ ರೆಡ್ಡಿ ಬಿರುಸಿನ ಪ್ರಚಾರ ಕೈಗೊಂಡಿದ್ದು ತನ್ನ ಅಪಾರ ಬೆಂಬಲಿಗರೊಂದಿಗೆ ಕ್ಷೇತ್ರದ ಮನೆ ಮನೆಗೆ ಪ್ರಚಾರ ಆರಂಭಿಸಿದರು.
ಬನ್ನೇರುಘಟ್ಟ ರಸ್ತೆಯ ಅರಕೆರೆ ಬಿಬಿಎಂಪಿ ವಾರ್ಡ್ ನಲ್ಲಿ ಪ್ರಚಾರ. ಸ್ಥಳೀಯ ಬಿಜೆಪಿ ಶಾಸಕ ಸತೀಶ್ ರೆಡ್ಡಿ ನೇತೃತ್ವದಲ್ಲಿ ಪ್ರಚಾರ.
ಮೋದಿ ಹೆಸರಿನಲ್ಲಿ ಮತಯಾಚನೆ ನಡೆಸುತ್ತಿರುವ ತೇಜಸ್ವಿ.
ಮನೆ ಮನೆಗೆ ತೆರಳಿ ಮತಯಾಚನೆ ನಡೆಸುತ್ತಿರುವ ಶಾಸಕ ಸತೀಶ್ ರೆಡ್ಡಿ ಮತ್ತು ತೇಜಸ್ವಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅಳವಡಿಕೆಯಾಗಿರುಗ ದೇಶದ್ರೋಹ ಪ್ರಕರಣಗಳನ್ನು ಕೈ ಬಿಡುವುದರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ತೇಜಸ್ವಿ.