ಮಂಡ್ಯ, ಮಾ.14, ನ್ಯೂಸ್ ಎಕ್ಸ್ ಪ್ರೆಸ್: ಶಾಲಾ ಬಸ್ ಅಪಘಾತಗೊಂಡು ಓರ್ವ ಬೈಕ್ ಸವಾರ ಸಾವಿಗೀಡಾಗಿ 30ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡ ಘಟನೆ ಮದ್ದೂರು ತಾಲೂಕಿನ ಕೆ. ಹೊನ್ನಲಗೆರೆ ಸಮೀಪ ನಡೆದಿದೆ.
ಗ್ರಾಮದಲ್ಲಿನ ಆರ್.ಕೆ. ಎಜುಕೇಶನ್ ಟ್ರಸ್ಟ್ಗೆ ಸೇರಿದ ಬಸ್ ಅಪಘಾತಗೊಂಡಿದ್ದು, ಮಧು(21) ಎಂಬ ಬೈಕ್ ಸವಾರ ಸಾವಿಗೀಡಾಗಿದ್ದಾನೆ. 30ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ.
ಇನ್ನು ಗಾಯಾಳುಗಳಿಗೆ ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮದ್ದೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.