ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ!

ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ!

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಸರ್ಕಾರಿ ಶಾಲಾ ಮಕ್ಕಳಿಗೆ ಕ್ಷೀರ ಭಾಗ್ಯ ಯೋಜನೆ ಜಾರಿಯಲ್ಲಿದ್ದು, ವಾರದಲ್ಲಿ ಮೂರು ಬಾರಿ ಹಾಲು ಕೊಡಲಾಗುತ್ತದೆ. ಇನ್ನು ಈ ಹಾಲಿಗೆ ರಾಗಿ ಮಾಲ್ಟ್ ಪೌಡರ್ ಹಾಕಿ ಕೊಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದರು.

ರಾಜ್ಯ ಸರ್ಕಾರಿ ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಹೆಲ್ತ್ ಮಿಕ್ಸ್ ವಿತರಿಸಲಾಗುವುದು. ಅಪೌಷ್ಟಿಕತೆ ನಿವಾರಣೆ ಉದ್ದೇಶದಿಂದ ವಿತರಿಸಲಾಗುತ್ತಿರುವ ಬಿಸಿ ಹಾಲಿನೊಂದಿಗೆ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಉಚಿತವಾಗಿ ನೀಡುತ್ತಿರುವ ಸಾಯಿ ಶ್ಯೂ ರಾಗಿ ಹೆಲ್ತ್ ಮಿಕ್ಸ್ ನೀಡಲಾಗುತ್ತಿದೆ.

ಈಗಾಗಲೇ ಸಂಸ್ಥೆ ಬೇರೆ ರಾಜ್ಯಗಳಲ್ಲಿ ಇದನ್ನು ವಿತರಿಸುತ್ತಿದ್ದು ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ 53,619 ಪ್ರಾಥಮಿಕ ಪ್ರೌಢಶಾಲೆಗಳ 55,55,952 ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು ಶಾಲೆಗಳಲ್ಲಿ ಸೋಮವಾರ, ಬುಧವಾರ, ಶುಕ್ರವಾರ ಕ್ಷೀರ ಭಾಗ್ಯ ಯೋಜನೆಯ 150 ಮೀಟರ್ ಬಿಸಿ ಹಾಲಿನಲ್ಲಿ ಮಿಶ್ರಣ ಮಾಡಿ ಕುದಿಸಿ ನೀಡಲಾಗುವುದು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 22ರಂದು ಬೆಂಗಳೂರಿನಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಆಯ್ದ ಶಾಲೆಗಳಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡುವುದಾಗಿ ಮಾರ್ಚ್ 31ರ ಒಳಗೆ ರಾಜಾದ್ಯಾಂತ ಇದನ್ನು ವಿತರಿಸಲಾಗುವುದು ಎಂದು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos