ಎಸ್ ಸಿಪಿ, ಟಿಎಸ್ ಪಿ ಸೌಲಭ್ಯಗಳ ಮಾಹಿತಿ ನೀಡಿ: ಜಗದೀಶ್ .ಕೆ. ನಾಯಕ್

ಎಸ್ ಸಿಪಿ, ಟಿಎಸ್ ಪಿ ಸೌಲಭ್ಯಗಳ ಮಾಹಿತಿ ನೀಡಿ: ಜಗದೀಶ್ .ಕೆ. ನಾಯಕ್

ದೇವನಹಳ್ಳಿ, ಜು. 31: ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸರ್ಕಾರದ ವಿವಿಧ ಇಲಾಖೆಗಳಿಂದ ನೀಡಲಾಗುವ ಸೌಲಭ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡುವ ಮೂಲಕ ಕಾರ್ಯಕ್ರಮಗಳನ್ನು ಜನರಿಗೆ  ತಲುಪಿಸಲು ಅನುಕೂಲವಾಗುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಜಗದೀಶ್.ಕೆ.ನಾಯಕ್ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಚಪ್ಪರದಕಲ್ಲು ಸರ್ಕಲ್ ನಲ್ಲಿರುವ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ  ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಗಳಡಿ ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆಗಳಿಗೆ ನಿಗದಿಪಡಿಸಲಾದ ಸೌಲಭ್ಯಗಳ ಮಾಹಿತಿಯನ್ನು  ಪತ್ರಿಕಾ ಜಾಹಿರಾತು, ಕರಪತ್ರ, ಭಿತ್ತಿಪತ್ರ, ಆನ್ಲೈನ್ ಹಾಗೂ ಗ್ರಾಮ ಸಭೆಗಳ ಮೂಲಕ ಸೌಲಭ್ಯಗಳ ಮಾಹಿತಿ ಜನರಿಗೆ ರವಾನಿಸಲು ಪ್ರಚಾರ ಕಾರ್ಯಕ್ರಮಗಳನ್ನು ಹಮಿಕೊಳ್ಳಬೇಕೆಂದು ನಿರ್ದೇಶಿಸಿದರು.

ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳ  ಯೋಜನೆಯಡಿ ವಿವಿಧ ಇಲಾಖೆಗಳಿಗೆ ನಿಗದಿಯಾಗಿರುವ ಅನುದಾನಗಳ ವಿವರ ಹಾಗೂ ವಿವಿಧ ಕಾರ್ಯಕ್ರಮಗಳಡಿ ಬಳಸಲಾದ ವೆಚ್ಚದ ವಿವರಗಳನ್ನು ಪರಿಶೀಲಿಸಿ ಇಲಾಖಾವಾರು ಮಾಹಿತಿ ಪಡೆದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಹನುಮಂತರಾಯಪ್ಪ, ಮುಖ್ಯ ಲೆಕ್ಕಾಧಿಕಾರಿ ಟಿ.ಆರ್.ಶೋಭ, ಮುಖ್ಯ ಯೋಜನಾಧಿಕಾರಿ ಬಿ.ವಿನುತಾರಾಣಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದೀಪಶ್ರೀ ಕೆ, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಉಪ ನಿರ್ದೇಶಕಿ ಪುಷ್ಪಾ ರಾಯ್ಕರ್  ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಫ್ರೆಶ್ ನ್ಯೂಸ್

Latest Posts

Featured Videos