ಮಂಗಳೂರು, ಮಾ.25, ನ್ಯೂಸ್ ಎಕ್ಸ್ ಪ್ರೆಸ್: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಎಸ್ಡಿಪಿಐ ಅಭ್ಯರ್ಥಿಯಾಗಿ ಇಲ್ಯಾಸ್ ಮುಹಮ್ಮದ್ ತುಂಬೆ ಅವರು ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಿದ್ದಾರೆ.
ಇದಕ್ಕೂ ಮುನ್ನ ಅವರು ನಗರದ ಹಂಪನ್ ಕಟ್ಟೆ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಕ್ಷದ ಸಾವಿರಾರು ಕಾರ್ಯಕರ್ತರೊಂದಿಗೆ ಪಾದೆಯಾತ್ರೆ ನಡೆಸಿದರು. ಬಳಿಕ ಅವರು ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ವೇಳೆ ಎಸ್ಡಿಪಿಐ ಮುಖಂಡರಾದ ಅಥಾವುಲ್ಲಾ ಜೊಕಟ್ಟೆ, ಹನೀಫ್ ಖಾನ್ ಕೋಡಾಜೆ, ರಿಯಾಝ್ ಫರಂಗಿಪೇಟೆ, ಜಲೀಲ್ ಕೃಷ್ಣಾಪುರ, ದೇವನೂರು ಪುಟ್ಟ ನಂಜಯ್ಯ, ಶಾಫೀ ಬೆಳ್ಳಾರೆ, ಹಸನ್ ಮತ್ತಿತರರು ಉಪಸ್ಥಿತರಿದ್ದರು.