ಧುಲೆಯಲ್ಲಿ ಏಳು ಜನ ದುರ್ಮರಣ

ಧುಲೆಯಲ್ಲಿ ಏಳು ಜನ ದುರ್ಮರಣ

ಧುಲೆ, ನ.30 : ವ್ಯಾನ್ವೊಂದು ಸೇತುವೆಯಿಂದ ಕೆಳಕ್ಕೆ ಉರುಳಿದ ಪರಿಣಾಮ ಏಳು ಮಂದಿ ಮೃತಪಟ್ಟು, ಇತರ 15 ಜನರು ಗಾಯಗೊಂಡಿರುವ ಘಟನೆ ಉತ್ತರ ಮಹಾರಾಷ್ಟ್ರದಲ್ಲಿ
ಇಂದು ನಸುಕಿನಲ್ಲಿ ಸಂಭವಿಸಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಶೋಚನೀಯವಾಗಿದ್ದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಮಹಾರಾಷ್ಟ್ರದ ಧುಲೆ ತಹಸೀಲ್ನ ಧುಲೆ-ಶೋಲಾಪುರ್ ರಸ್ತೆಯ ವಿಂಚುರ್ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಉರುಳಿ ಬಿತ್ತು ಎಂದು ಸ್ಥಳಕ್ಕೆ ಭೇಟಿ ನೀಡಿದ ಉತ್ತರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos