ಬೆಳಗಾವಿ, ಮೇ. 4, ನ್ಯೂಸ್ ಎಕ್ಸ್ ಪ್ರೆಸ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದದಲ್ಲಿ ಜಾರಿಗೆ ತಂದಿದ್ದ ಶಾದಿ ಭಾಗ್ಯ ಯೋಜನೆಯನ್ನು ದೋಸ್ತಿ ಸರಕಾರ ಕೈಬಿಟ್ಟಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ದಾಖಲೆಗಳನ್ನು ಬಿಡುಗಡೆ ಮಾಡಿ ಮಾತನಾಡಿರುವ ಆರ್.ಟಿ.ಐ ಕಾರ್ಯಕರ್ತ ಭೀಮಪ್ಪ ಗಡಾದ ಅವರು ಶಾದಿ ಭಾಗ್ಯ ಯೋಜನೆ ಅಡಿಯಲ್ಲಿ ಮದುವೆಯಾದ ಸುಮಾರು 28,540 ಅರ್ಹ ಫಲಾನುಭವಿಗಳಿಗೆ ಇನ್ನೂ ಧನ ಸಹಾಯ ಸಿಕ್ಕಿಲ್ಲ. ಇದಲ್ಲದೇ ಈ ಯೋಜನೆಯನ್ನು ನಂಬಿ ಹಲವು ಜನರು ಸಹಾಯ ಹಣಕ್ಕಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಿ ಮದುವೆ ಮಾಡಿದ್ದರು. ಆದರೆ ಆ ಕುಟುಂಬಗಳಿಗೆ ಇಲ್ಲಿ ತನಕ ಸರಿಯಾಗಿ ಹಣದ ವಿತರಣೆಯಾಗಿಲ್ಲ ಅಂತ ಗಂಭೀರ ಆರೋಪ ಮಾಡಿದ್ದಾರೆ. ಇದೇ ವೇಳೆ ಅವರು ಮಾತನಾಡಿ ಯೋಜನೆಯ 142 ಕೋಟಿ ರೂ. ಹಣವನ್ನು ಸಮ್ಮಿಶ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ ಅಂತ ಹೇಳಿದರು.