ಬಿಜೆಪಿ ನಾಯಕರಿಗೆ ‘ಶಾ’ಕಿಂಗ್

ಬಿಜೆಪಿ ನಾಯಕರಿಗೆ ‘ಶಾ’ಕಿಂಗ್

ಬೆಂಗಳೂರು, ನ. 5 : ಕಾಂಗ್ರೆಸ್ ಗೆ ಮತದಾರರು ಬಲಿಯಾಗದಂತೆ ಎಚ್ಚರವಹಿಸಿ ಉಪಚುನಾವಣೆಯತ್ತ ಚಿತ್ತ ಹರಿಸಬೇಕೆಂದು ರಾಜ್ಯದ ಎಲ್ಲಾ ಬಿಜೆಪಿ ನಾಯಕರಿಗೆ ಗೃಹ ಸಚಿವ ಅಮಿತ್ ಶಾ ಖಡಕ್ ಸೂಚನೆ ನೀಡಿದ್ದಾರೆ.

ಖಡಕ್ ಎಚ್ಚರಿಕೆ : ಯಡಿಯೂರಪ್ಪನವರ ಆಡಿಯೋ ಸಂಚಲನ ಸೃಷ್ಟಿಸಿದ ಹಿನ್ನಲೆ ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಯಡಿಯೂರಪ್ಪ ಅವರಿಂದ ಮಾಹಿತಿ ಪಡೆದುಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಖಡಕ್ ಸೂಚನೆಯನ್ನು ರವಾನಿಸಿದ್ದಾರೆ. ಶಾ ಸಂದೇಶ ನೋಡಿ ರಾಜ್ಯ ಬಿಜೆಪಿ ನಾಯಕರು ಗೊಂದಲಕ್ಕೊಳಗಾಗಿದ್ದಾರೆ.

ಸೂಕ್ತ ಸಮಯವಲ್ಲ : ನಾಲ್ಕೈದು ದಿನಗಳಿಂದ ಸಿಎಂ ಯಡಿಯೂರಪ್ಪನವರ ಆಡಿಯೋ ಸಂಚಲನ ಸೃಷ್ಟಿಸಿದೆ. ಆಡಿಯೋಗೆ ಸಂಬಂಧಿಸಿದಂತೆ ಪಕ್ಷದಲ್ಲಿ ರಹಸ್ಯವಾಗಿ ಆಂತರಿಕ ತನಿಖೆ ನಡೆಸಿ ರೆಕಾರ್ಡ್ ಮಾಡಿದವರ ಹೆಸರು ಬಹಿರಂಗ ಪಡಿಸಬೇಡಿ. ಸದ್ಯ ಆಡಿಯೋ-ವಿಡಿಯೋ ಮಾಡಿದವರ ಹೆಸರು ಬಹಿರಂಗಪಡಿಸಲು ಸೂಕ್ತ ಸಮಯ ಇಲ್ಲ. ತನಿಖೆ ಪೂರ್ಣಗೊಂಡ ನಂತರ ವರದಿಯನ್ನು ಕಳುಹಿಸಬೇಕು ಮತ್ತು ತಪ್ಪಿತಸ್ಥರ ಹೆಸರು ಎಲ್ಲಿಯೂ ಲೀಕ್ ಆಗದಂತೆ ನೋಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ತಪ್ಪಿತಸ್ಥರ ವಿರುದ್ಧ ನಾವೇ ಸೂಕ್ತ ಕ್ರಮಕೈಗೊಳ್ಳುತ್ತೇವೆ. ಎಲ್ಲರೂ ಉಪಚುನಾವಣೆಯತ್ತ ಗಮನ ಕೊಡಿ ಅಮಿತ್ ಶಾ ಸಂದೇಶವನ್ನು ರವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೋಮವಾರ ಸುಪ್ರೀಂಕೋರ್ಟ್ ಕದ ತಟ್ಟಿರುವ ಕಾಂಗ್ರೆಸ್, ಸಿಎಂ ಯಡಿಯೂರಪ್ಪರ ಆಡಿಯೋವನ್ನು ಪರಿಗಣಿಗಣಿಸಿ ಮತ್ತೆ ವಿಚಾರಣೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿತ್ತು. ಮನವಿ ಪುರಸ್ಕರಿಸಿದ್ದ ಸುಪ್ರೀಂಕೋರ್ಟ್ ಇಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಈಗಾಗಲೇ ವಿಡಿಯೋ ತುಣುಕು ಮತ್ತು ಅದರಲ್ಲಿನ ಸಂಭಾಷಣೆಯನ್ನು ಭಾಷಾಂತರ ಮಾಡಿ ಸುಪ್ರೀಂಕೋರ್ಟ್ ಗೆ ಸಲ್ಲಿಸಲಾಗಿದೆ. ಈ ಅಂಶಗಳನ್ನು ನ್ಯಾ.ಎನ್.ವಿ.ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ. ಕೃಷ್ಣ ಮುರಾರಿ ಸಮ್ಮುಖದ ಪೀಠ ಪರಿಶೀಲನೆ ಮಾಡಲಿದೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos