ಶಾಸಕ ನಾಗನಗೌಡ ಪುತ್ರನಿಗೆ ಜೀವ ಬೆದರಿಕೆ

ಶಾಸಕ ನಾಗನಗೌಡ ಪುತ್ರನಿಗೆ ಜೀವ ಬೆದರಿಕೆ

ಯಾದಗಿರಿ, ಅ. 22 : ರಾಷ್ಟ್ರಮಟ್ಟದಲ್ಲಿ ಭಾರೀ ಸದ್ದು ಮಾಡಿದ್ದ ಆಪರೇಷನ್ ಕಮಲ ಆಡಿಯೋ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ಆದ್ರೆ ಇದನೆಲ್ಲ ಶರಣಗೌಡ ಅವರು ಫೋನ್ ನಲ್ಲಿ ರೇಕಾರ್ಡ್ ಮಾಡಿಕೊಂಡು ಸಿಎಂ ಕುಮಾರಸ್ವಾಮಿ ಅವರಿಗೆ ತಂದು ನೀಡಿದ್ದರು. ಬಳಿಕ ರಾಜ್ಯ ಬಜೆಟ್ ದಿನದಂದು [ಫೆ.8] ಕುಮಾರಸ್ವಾಮಿ ಅವರು ದಿಢೀರ್ ಸುದ್ದಿಗೋಷ್ಠಿ ನಡೆಸಿ ಆಪರೇಷನ್ ಕಮಲದ ಆಡಿಯೋ ಕ್ಲಿಪ್ ಬಬಿಡುಗಡೆ ಮಾಡಿದ್ದರು. ಆಪರೇಷನ್ ಕಮಲದ ಆಡಿಯೋ ಬಹಿರಂಗ ಪಡಿಸಿದ್ದಕ್ಕೆ ನನಗೆ ಜೀವ ಬೆದರಿಕೆಯಿದೆ ಎಂದು ಗುರುಮಿಠಕಲ್ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಪುತ್ರ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ ಗಂಭೀರ ಆರೋಪ ಮಾಡಿದ್ದಾರೆ.
ಜೆಡಿಎಸ್ ಕಾರ್ಯಕರ್ತರ ಪ್ರತಿಭಟನಾ ವೇಳೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪನವರು ಆಪರೇಷನ್ ಕಮಲ ಪ್ರಕರಣ ಮನಸ್ಸಿನಲ್ಲಿಟ್ಟುಕೊಂಡು ನನ್ನ ಮೇಲೆ ಹಗೆ ಸಾಧಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ನನ್ನ ಮೇಲೆ ಸುಳ್ಳು ಕೇಸ್ ದಾಖಲಿಸಲು ಪೊಲೀಸ್ ಅಧಿಕಾರಿಗಳನ್ನು ಬಳಸಿಕೊಂಡು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದರು.

ಫ್ರೆಶ್ ನ್ಯೂಸ್

Latest Posts

Featured Videos