ಧಾರವಾಡ ದುರಂತ: ಕನಿಷ್ಠ 10 ಲಕ್ಷ ಪರಿಹಾರ ನೀಡುವಂತೆ ಶೆಟ್ಟರ್ ಆಗ್ರಹ

ಧಾರವಾಡ ದುರಂತ: ಕನಿಷ್ಠ 10 ಲಕ್ಷ ಪರಿಹಾರ ನೀಡುವಂತೆ ಶೆಟ್ಟರ್ ಆಗ್ರಹ

ಧಾರವಾಡ, ಮಾ.21, ನ್ಯೂಸ್ ಎಕ್ಸ್ ಪ್ರೆಸ್: ಧಾರವಾಡ ಕಟ್ಟಡ ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಕನಿಷ್ಟ 10ಲಕ್ಷರೂ. ಪರಿಹಾರ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆ ದುರದೃಷ್ಟಕರ ಕಾರ್ಯಾಚರಣೆ ತ್ವರಿತಗತಿಯಲ್ಲಿ ನಡೆಯುತ್ತಿದೆ. ಮೊದಲು ಅವಶೇಷಗಳಡಿ ಸಿಲುಕಿರುವವರನ್ನು ಸುರಕ್ಷಿತವಾಗಿ ಹೊರತರಬೇಕು.

ಮೃತಪಟ್ಟವರ ಕುಟುಂಬಕ್ಕೆ 10ಲಕ್ಷ ರೂ. ಪರಿಹಾರ ನೀಡಬೇಕು ಎಂದು ಅವರು ಹೇಳಿದರು. ಅಕ್ರಮ ಕಟ್ಟಡಗಳಿಗೆ ಸಿಸಿ ಕೊಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಕಟ್ಟಡ ಮಾಲೀಕರು ಮತ್ತು ಇಂಜಿನಿಯರ್ ಗಳು ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos