ತವರು ಪಕ್ಷಕ್ಕೆ ಮರಳಿದ ಶೆಟ್ಟರ್‌

ತವರು ಪಕ್ಷಕ್ಕೆ ಮರಳಿದ ಶೆಟ್ಟರ್‌

ದೆಹಲಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳ್ಳಿಯಲ್ಲಿ ಟಿಕೆಟ್‌ ದೊರೆಯಲಿಲ್ಲ ಎಂದು ಮುನಿಸಿಕೊಂಡು ಬಿಜೆಪಿ ತೊರೆದಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಜಗದೀಶ್‌ ಶೆಟ್ಟರ್‌ ಅವರು ಬಿಜೆಪಿಗೆ ಸೇರಿದ್ದಾರೆ. ಲೋಕಸಭೆ ಚುನಾವಣೆಗೆ ಸಿದ್ದತೆ ನಡೆಯುತ್ತಿರುವಾಗ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿರುವ ಶೆಟ್ಟರ್‌ ಅವರು ಒಂಬತ್ತು ತಿಂಗಳಿನಲ್ಲೇ ಮಾತೃಪಕ್ಷಕ್ಕೆ ಮರಳಿದ್ದಾರೆ. ಈಗಾಗಲೇ ವಿಧಾನಪರಿಷತ್‌ ಸ್ಥಾನಕ್ಕೂ ರಾಜೀನಾಮೆಯನ್ನು ರವಾನಿಸಿದ್ದಾರೆ. ಖುಷಿಯಿಂದಲೇ ಮಾತೃಪಕ್ಷಕ್ಕೆ ಮರಳುತ್ತಿರುವುದು ಸಂತೋಷದಾಯಕ ಸಂಗತಿ ಎಂದು ಜಗದೀಶ್‌ ಶೆಟ್ಟರ್‌ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ದೆಹಲಿಯ ಬಿಜೆಪಿಯಲ್ಲಿ ಗುರುವಾರ ನಡದ ಸರಳ ಕಾರ್ಯಕ್ರಮದಲ್ಲಿ ಜಗದೀಶ್‌ ಶೆಟ್ಟರ್‌ ಅವರನ್ನು ಪಕ್ಷದ ನಾಯಕರು ಬರ ಮಾಡಿಕೊಂಡರು. ಈ ವೇಳೆ ಕರ್ನಾಟಕದ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್‌, ರಾಜೀವ್‌ ಚಂದ್ರಶೇಖರ್‌ ಉಪಸ್ಥಿತಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

 

ಫ್ರೆಶ್ ನ್ಯೂಸ್

Latest Posts

Featured Videos