ಪೀಣ್ಯ:ಊರನ್ನು ಸ್ವಚ್ಛ ಮಾಡುವ ಮೊದಲು ತಮ್ಮ ಮನೆ, ವಾರ್ಡ್ ಸ್ವಚ್ಛವಾಗಿಟ್ಟುಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದು ಮೋದಿ ಬ್ರಿಗೇಡ್ ರಾಜ್ಯಾಧ್ಯಕ್ಷ ಗಣೇಶ್ ಪ್ರಸಾದ್ ಅಭಿಪ್ರಾಯಪಟ್ಟರು.
ದಾಸರಹಳ್ಳಿ ಬಿಜೆಪಿ ಶಕ್ತಿಕೇಂದ್ರ ಹಾಗು ಮೋದಿ ಬ್ರಿಗೇಡ್ ವತಿಯಿಂದ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಜಯಂತಿ ಅಂಗವಾಗಿ ದಾಸರಹಳ್ಳಿ ಕ್ಷೇತ್ರದ ಭೂಮಿಕಾ ಲೇಔಟ್ ಮತ್ತು ಶೆಟ್ಟಿಹಳ್ಳಿ ಸರ್ಕಾರಿ ಆಸ್ಪತ್ರೆಯ ಒಳಾಂಗಣ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಳೆದ ಆರು ವರ್ಷಗಳಿಂದ ಅಕ್ಟೋಬರ್ ಮಾಸ ಪೂರ್ತ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು ಯಶಸ್ವಿಯಾಗಿ ನಡೆಯುತ್ತಿದೆ, ಈ ಕಾರ್ಯಕ್ರಮದಲ್ಲಿ ಸ್ವಚ್ಛತೆ ಜೊತೆಗೆ ಸನ್ಮಾನ್ಯ ಪ್ರಧಾನಿ ಮೋದಿಯವರ ಕೆಲಸಗಳ ಬಗ್ಗೆ ಅರಿವನ್ನು ಪ್ರತಿಯೊಂದು ಮನೆಗೂ ತಲುಪಿಸುವ ಕೆಲಸವನ್ನು ಮೋದಿ ಬ್ರಿಗೇಡ್ ಮತ್ತು ಸ್ಥಳೀಯ ಬಿಜೆಪಿ ಮಾಡುತ್ತಿದೆ. ಒಳ್ಳೆಯ ಕೆಲಸಗಳನ್ನು ಪ್ರತಿಯೊಬ್ಬರು ಮುಂದುವರೆಸಬೇಕು ಎಂದರು.
ದಾಸರಹಳ್ಳಿ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆನಂದ್ ರೆಡ್ಡಿ ಮಾತನಾಡಿ ನಮ್ಮ ಮನಸ್ಸನ್ನು ಸ್ವಚ್ಛ ಮಾಡಿಕೊಳ್ಳಲು ಪ್ರಾರಂಭ ಮಾಡಿ, ಪ್ರತಿಯೊಬ್ಬರು ತಮ್ಮ ಮನೆಯ ಸುತ್ತ ಸ್ವಚ್ಛ ಮಾಡಿಕೊಳ್ಳಬೇಕು, ಇದರಿಂದ ವಾತಾವರಣ ಶುಭ್ರವಾಗುವುದಲ್ಲದೆ ದೇಶ ಸುಭಿಕ್ಷವಾಗುತ್ತದೆ ಎಂದರು.