ಬೆಳಗಾವಿ, ಸೆ. 10 : ಮಹಾದಾಯಿ ಸಮಸ್ಯೆ ಇತ್ಯರ್ಥ ಮಾಡುತ್ತೇವೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದರು.
ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,ಮಹಾದಾಯಿವಿವಾದ ಸಂಬಂಧ 3 ರಾಜ್ಯಗಳ ಮುಖ್ಯಮಂತ್ರಿಗಳು ಸೇರಿ ಸಭೆ ಮಾಡುತ್ತೇವೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರವರನ್ನು ಭೇಟಿಯಾಗಿರುವೆ. ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿಗೆ ದಿನಾಂಕ ನಿಗದಿ ಪಡಿಸಲು ಹೇಳಿದ್ದೇನೆ. ಒಟ್ಟಾರೆ ಆದಷ್ಟು ಬೇಗ ಮಹದಾಯಿ ವಿವಾದ ಬಗೆಹರಿಸುತ್ತೇವೆಂದು ಹೇಳಿದರು.