‘ಸರ್ಕಾರದಲ್ಲಿ ಭಾರೀ ಬದಲಾವಣೆಯಾಗಲಿದೆ’ : ಬಸವರಾಜ ಬೊಮ್ಮಾಯಿ

‘ಸರ್ಕಾರದಲ್ಲಿ ಭಾರೀ ಬದಲಾವಣೆಯಾಗಲಿದೆ’ : ಬಸವರಾಜ ಬೊಮ್ಮಾಯಿ

ಬೆಳಗಾವಿ, ಮೇ. 24, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಸಮ್ಮಿಶ್ರ ಸರಕಾರ ಪತನವಾಗಿ ಬಿ.ಎಸ್.ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ. ಇಂದು ಬೆಳಗಾವಿಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಮುಖಭಂಗ ಅನುಭವಿಸಿವೆ. ಸಮ್ಮಿಶ್ರ ಸರಕಾರ ಪತನವಾಗಿ ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಪುನರುಚ್ಚರಿಸಿದರು.

ನಿರೀಕ್ಷೆಗೂ ಮೀರಿ ಲೋಕಸಭಾ ಚುನಾವಣೆಯ ಫಲಿತಾಂಶ ಬಂದಿದೆ. ರಾಜ್ಯ ಕಾಂಗ್ರೆಸ್ ನಲ್ಲಿ ಬಾರಿ ಬದಲಾವಣೆಯಾಗಲಿದೆ. ಇದು ಸಮ್ಮಿಶ್ರ ಸರಕಾರದ ಅಂತ್ಯಕ್ಕೆ ನಾಂದಿ ಹಾಡಲಿದೆ ಎಂದು ಭವಿಷ್ಯ ನುಡಿದರು.

ಫ್ರೆಶ್ ನ್ಯೂಸ್

Latest Posts

Featured Videos