ಹುಬ್ಬಳ್ಳಿ ಮಾ. 23, ನ್ಯೂಸ್ ಎಕ್ಸ್ ಪ್ರೆಸ್ ಮಾ,22 ರಂದು ನಿಧನರಾದ ಪೌರಾಡಳಿತ ಸಚಿವ ಶಿವಳ್ಳಿ ಅವರ ಅಂತಿಮ ದರ್ಶನ ಪಡೆಯಲು ಬಂದ ವೇಳೆ ಮಾತನಾಡಿದ ಸಚಿವ ಡಿ.ಕೆ. ಶಿವಕುಮಾರ್, ಶಿವಳ್ಳಿ ಅವರ ಸರಳತೆ ಅವರನ್ನು ಬಿಟ್ಟು ಹೋಗಿರಲಿಲ್ಲ. ಶಿವಳ್ಳಿ ಅಗಲಿಕೆಯ ನೋವು ನನಗೆ ತಡೆಯಲು ಆಗುತ್ತಿಲ್ಲ. ಆತ ನನ್ನ ಕುಟುಂಬದ ಸದಸ್ಯನಿಗಿಂತ ಹೆಚ್ಚಾಗಿದ್ದರು. ಶಿವಳ್ಳಿ ನನ್ನ ಆತ್ಮೀಯ ಮಿತ್ರ ಎಂದು ಹೇಳಿದರು.
ನಾನೇ ಶಿವಳ್ಳಿ ಅವರನ್ನು ಕಾಂಗ್ರೆಸ್ ಗೆ ಕರೆ ತಂದಿದ್ದೆ. ಶಿವಳ್ಳಿ ಅಗಲಿಕೆ ನಂಬಲು ಸಾಧ್ಯವಾಗುತ್ತಿಲ್ಲ. ಶಿವಳ್ಳಿ ಬಡವರ ಪರವಾಗಿ ಹೋರಾಟ ಮಾಡುವ ವ್ಯಕ್ತಿಯಾಗಿದ್ದರು ಎಂದರು.