ಬೆಂಗಳೂರು: ಶೋಬಾ ಕರಂದ್ಲಾಜೆ ಕಾರು ಡಿಕ್ಕಿಯಾಗಿ ವ್ಯಕ್ತಿ ಬಲಿಯಾಗಿರುವ ಘಟನೆ ಬೆಂಗಳೂರಿನ ಕೆ.ಆರ್. ಪುರಂನಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಕೆ.ಆರ್.ಪುರಂನಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಕ್ಷೇತ್ರದಲ್ಲಿ ಸಂಚಾರ ಮಾಡುತ್ತಿದ್ರು.
ಇಂದು ಬೆಳಗ್ಗೆ ಹೋಂಡಾ ಆ್ಯಕ್ಟಿವ ಬೈಕ್ ನಲ್ಲಿ ಪ್ರಕಾಶ್ ತೆರಳುತ್ತಿದ್ದರು. ಈ ವೇಳೆ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಬಂದಿದ್ದ ಬಿಜೆಪಿ ಮುಖಂಡರೊಬ್ಬರು ಕಾರು ರಸ್ತೆಯಲ್ಲಿ ಪಾರ್ಕ್ ಮಾಡಿ ಹಿಂದೆ ಮುಂದೆ ನೋಡದೇ ಏಕಾಏಕಿ ಬಾಗಿಲು ತೆರೆದಿದ್ದು, ಅದು ಬೈಕ್ಗೆ ತಾಗಿದೆ. ಪರಿಣಾಮ ಪ್ರಕಾಶ್ ಕೆಳಗೆ ಬಿದ್ದಿದ್ದಾನೆ. ಬಳಿಕ ಹಿಂದಿನಿಂದ ಬರುತ್ತಿದ್ದ ಖಾಸಗಿ ಬಸ್ ಕೆಳಗೆ ಬಿದ್ದಿದ್ದ ಪ್ರಕಾಶ್ ಅವರ ಮೇಲೆ ಹರಿದಿದೆ.
ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಪ್ರಕಾಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ. ಇನ್ನು ಈ ಬಗ್ಗೆ K.R.ಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.