ಕೆ.ಆರ್.ಪುರ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ಮಾಡಿದ ಶೋಭಾ ಕರಂದ್ಲಾಜೆ

ಕೆ.ಆರ್.ಪುರ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ಮಾಡಿದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ ವಿರುದ್ಧ ಶೋಭಾ ಕರಂದ್ಲಾಜೆ ಸ್ಪರ್ಧಿಸುತ್ತಿದ್ದಾರೆ. ಈ ಚುನಾವಣೆಯಲ್ಲಿ ಮತ್ತೆ ಮೋದಿಯವರಿಗೆ ಆಶಿರ್ವಾದ ಮಾಡಿದರೆ ದೇಶ ಮತ್ತಷ್ಟು ಅಭಿವೃದ್ಧಿ ಪತದತ್ತ ಸಾಗಲಿದೆ ಎಂದು ತಿಳಿಸಿದರು. ನರೇಂದ್ರ ಮೋದಿ ಅವರ ನಾಯಕತ್ವದಿಂದಲೇ ಭಾರತ ದೇಶವು ಸದೃಢವಾಗಿ ಇರುತ್ತದೆ. ಬೆಂಗಳೂರು ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಇಂದು ಕೆ ಆರ್ ಪುರ ಕ್ಷೇತ್ರದ ವಿಜಿನಾಪುರ ವಾರ್ಡ್ ಮತ್ತು ರಾಮಮೂರ್ತಿನಗರ ವಾರ್ಡ್ ಗಳಲ್ಲಿ ಶಾಸಕ ಬೈರತಿ ಬಸವರಾಜ್ ನೇತ್ರತ್ವದಲ್ಲಿ ನೂರಾರು ಕಾರ್ಯಕರ್ತರ ಜೊತೆಗೆ ಬೈಕ್ ರ್ಯಾಲಿ ಮೂಲಕ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮತಯಾಚನೆ ಮಾಡಿದರು.

ನಂತರ ಪ್ರಚಾರದ ವೇಳೆ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯವರು ಭಾರತ ದೇಶದ ಗ್ರಾಮೀಣ ಮಹಿಳೆಯರಿಗೆ, ಬಡವರಿಗೆ ಮನೆ, ಕುಡಿಯಲು ನೀರು, ಶೌಚಾಲಯ, ಉಜ್ವಲ ಗ್ಯಾಸ್, ಅಕ್ಕಿ ಸೇರಿದಂತೆ ಶಾಶ್ವತ ಗ್ಯಾರೆಂಟಿಗಳನ್ನು ನೀಡಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಗ್ಯಾರೆಂಟಿಗಳು ಎಂದು ವಿವರಿಸಿದರು.

ದೇಶ ಕಂಡ ದಿಟ್ಟ ಧಿಮಂತ ನಾಯಕ ನರೇಂದ್ರ ಮೋದಿಯವರು, ದೇಶದ ಎಲ್ಲರಿಗೂ ಶಾಶ್ವತ ಗ್ಯಾರೆಂಟಿಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ‘ಪಿಎಂ ಆವಾಸ ಯೊಜನೆ’ಅಡಿಯಲ್ಲಿ 8 ಲಕ್ಷ ಮನೆ, 12 ಲಕ್ಷ ಶೌಚಾಲಯ ನಿರ್ಮಿಸಿಕೊಟ್ಟಿದ್ದಾರೆ. ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆ ಮನೆಗೆ ನಲ್ಲಿ ಮೂಲಕ ನೀರು ನೀಡುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಬೈರತಿ ಬಸವರಾಜ್, ಮಂಡಲ ಅಧ್ಯಕ್ಷ ಮುನೇಗೌಡ,ಬಿಜೆಪಿ ಮುಖಂಡ ಬಾಕ್ಸರ್ ನಾಗರಾಜ್, ಶಾಂತ ಕೃಷಮೂರ್ತಿ, ಇಟ್ಟಾಚಿ ಮಂಜು,ಪ್ರದೀಪ್ ಗೌಡ, ರಮೇಶ ಗೌಡ ಮತ್ತಿತರರು ಉಪಸ್ಥಿತಿಯಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos