ಬೆಂಗಳೂರು, ಜ. 14: ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಬಿಜೆಪಿಯ ನೂತನ ಶಾಸಕರಿಗೆ ಮತ್ತೊಮ್ಮೆ ನಿರಾಸೆಯಾಗಿದ್ದು, ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಸಂಕ್ರಾಂತಿಗೆ ಬದಲು ಫೆಬ್ರವರಿಯಲ್ಲಿ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.
ಸಂಕ್ರಾಂತಿ ಬಳಿಕ ನಡೆಯಲಿದೆ ಎನ್ನಲಾಗಿದ್ದ ಸಂಪುಟ ವಿಸ್ತರಣೆ ಇದೀಗ ಮಾಸಾಂತ್ಯಕ್ಕೆ ಮುಂದೂಡಿಕೆಯಾಗಿದ್ದು, ವರಿಷ್ಠರ ಒಪ್ಪಗೆ ದೊರೆಯದಿದ್ದರೆ ಫೆಬ್ರವರಿಗೆ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ .
ಬಿಜೆಪಿ ಹೈಕಮಾಂಡ್ ಸದ್ಯ ಸಂಪುಟ ವಿಸ್ತರಣೆ ಸೇರಿದಂತೆ ಇತರ ವಿಚಾರಗಳ ಬಗ್ಗೆ ಚರ್ಚೆಗೆ ಆಸಕ್ತಿ ತೋರುತ್ತಿಲ್ಲ ಎನ್ನಲಾಗಿದೆ. ಈ ಮಧ್ಯೆ ಸಚಿವ ಸ್ಥಾನದ ಆಕಾಂಕ್ಷಿಗಳ ಒತ್ತಡ ಹೆಚ್ಚುತ್ತಿದ್ದು, ಯಡಿಯೂರಪ್ಪನವರು ಇಕ್ಕಟ್ಟಿಗೆ ಸಿಲುಕಿದ್ದಾರೆ ಎನ್ನಲಾಗಿದೆ.