ಸಾರಿಗೆ ಸಂಸ್ಥೆ ಘಟಕದಲ್ಲಿ ವಾಣಿಜ್ಯ ಮಳಿಗೆ ಕಟ್ಟಡ

ಸಾರಿಗೆ ಸಂಸ್ಥೆ ಘಟಕದಲ್ಲಿ ವಾಣಿಜ್ಯ ಮಳಿಗೆ ಕಟ್ಟಡ

ಅಥಣಿ, ಜ. 24: ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಕ್ಕೋಡಿ ವಿಭಾಗದ ಅಥಣಿ ಘಟಕದಲ್ಲಿ ವಾಣಿಜ್ಯ ಕಟ್ಟಡದ ಶಂಕು ಸ್ಥಾಪನೆಗೆ ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ  ಲಕ್ಷ್ಮಣ  ಸವದಿಯವರು ಭೂಮಿ ಪೂಜೆ ನೆರವೇರಿಸಿದರು.

ಅಥಣಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹಳೇಬಸ್ ನಿಲ್ದಾಣದ ಬಳಿ ನಿಗಮದ ವತಿಯಿಂದ ಸರಿ ಸುಮಾರು 67 ಲಕ್ಷದ ಯೋಜನೆಯಲ್ಲಿ ನಿರ್ಮಾಣವಾಗುತ್ತಿರುವ 15 ಕೊಠಡಿಗಳ ಕಾಮಗಾರಿಗೆ ಡಿಸಿಎಂ ಲಕ್ಷ್ಮಣ ಸವದಿ ಭೂಮಿ ಪೂಜೆ ನೆರವೇರಿಸಿದರು.

ಇದೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ (ರಿ) ಚಿಕ್ಕೋಡಿ ವಿಭಾಗದ ಅಥಣಿ ಘಟಕ ನೌಕರರಿಂದ ಡಿಸಿಎಂ ಲಕ್ಷ್ಮಣ ಸವದಿ‌ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿ, ರಾಜ್ಯದಲ್ಲಿ 1 ಲಕ್ಷದ 30 ಸಾವಿರ ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸದರಿ ಸಾರಿಗೆ ಸಂಸ್ಥೆಯ ನೌಕರರನ್ನು ರಾಜ್ಯ ಸರ್ಕಾರ  ಸರ್ಕಾರಿ ನೌಕರರೆಂದು ಪರಿಗಣಿಸಿ ಈ ನೌಕರರಿಗೆ ನ್ಯಾಯ ಒದಗಿಸಿ ಕೊಡಬೇಕೆಂದು  ಮನವಿ ಮೂಲಕ ತಿಳಿಸಿದರು. ಇದಕ್ಕೆ ಸ್ಪಂದಿಸಿದ ಸಾರಿಗೆ ಸಚಿವರು ಈಗಾಗಲೇ ಸಮಿತಿ ರಚಿಸಿದ್ದು, ಈ ಕುರಿತು ಮುಖ್ಯಮಂತ್ರಿ ಜೊತೆ ಮಾತನಾಡಿ ಬೇಡಿಕೆ ಈಡೆರಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos