ಶ್ರೀನಿವಾಸ್ ಪ್ರಸಾದ್ ವಿರುದ್ಧ ಸಚಿವ ಹೆಚ್.ಡಿ. ರೇವಣ್ಣ ಕೆಂಡಾಮಂಡಲ!

ಶ್ರೀನಿವಾಸ್ ಪ್ರಸಾದ್ ವಿರುದ್ಧ ಸಚಿವ ಹೆಚ್.ಡಿ. ರೇವಣ್ಣ ಕೆಂಡಾಮಂಡಲ!

ಹಾಸನ, ಮಾ.7, ನ್ಯೂಸ್ ಎಕ್ಸ್ ಪ್ರೆಸ್: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ವಿರುದ್ಧ ಹಾಸನ ಬಿಜೆಪಿ ಶಾಸಕ ಹಾಗೂ ಶ್ರೀನಿವಾಸ ಪ್ರಸಾದ್ ಲಘುವಾಗಿ ಟೀಕಿಸಿದ್ದಕ್ಕೆ ಲೋಕಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಕೆಂಡಾಮಡಲ

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವನ್ರೀ ಅವನು ಶ್ರೀನಿವಾಸ್ ಪ್ರಸಾದ್? ದೇವೇಗೌಡರು ದೆಹಲಿಗೆ ಓಡಾಡ್ಕೊಂಡು ಇಲ್ಲ. ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅವನು ಯಡಿಯೂರಪ್ಪನನ್ನು ಚರ್ಚೆಗೆ ಕರೆಯಲಿ. ದೇವೇಗೌಡರು ಏನು ಕೆಲಸ ಮಾಡಿದ್ದಾರೆ. ಇಲ್ಲ ಎನ್ನುವುದನ್ನು ಚರ್ಚೆ ಆಗಲಿ ಎಂದು ಏಕವಚನದಲ್ಲೇ ಗುಡುಗಿದ್ದಾರೆ.

ಈ ರಾಜ್ಯವನ್ನು ಬಿಜೆಪಿಗೆ ಬರೆದುಕೊಟ್ಟಿಲ್ಲ. ಪ್ರಧಾನಿಗೆ ಬರೆದುಕೊಟ್ಟ ಅಸತ್ಯವನ್ನೆಲ್ಲ ಹೇಳಿಸುತ್ತಿದ್ದಾರೆ. ಬಿಜೆಪಿಯ ನಾಲ್ಕೂವರೆ ವರ್ಷದ ಆಡಳಿತ ಹೇಗಿದೆ ಎಂಬುದನ್ನು ಜನ ನೋಡಿದ್ದಾರೆ. ಹೀಗಿದ್ದರೂ ರೈತರ ಸಾಲಮನ್ನಾ ಮಾಡಿಲ್ಲ. ಅವರಿಗೆ ಸಂಸ್ಕೃತಿ ಇಲ್ಲ ಎಂದು ಕಿಡಿಕಾರಿದರು.

ಫ್ರೆಶ್ ನ್ಯೂಸ್

Latest Posts

Featured Videos