ಬೆಂಗಳೂರು: ಐಪಿಎಲ್ 2024 ರ 31ನೇ ಪಂದ್ಯದಲ್ಲಿ 223 ರನ್ಗಳ ಬೃಹತ್ ಟಾರ್ಗೆಟ್ ನೀಡಿದ ಹೊರತಾಗಿಯೂ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಹೀನಾಯ ಸೋಲು ಅನುಭವಿಸಬೇಕಾಯಿತು.
ಗೆಲ್ಲುವ ಪಂದ್ಯವನ್ನು ಕೈಯ್ಯಾರೆ ಕೈಚೆಲ್ಲಿದ ಆಘಾತದಲ್ಲಿದ್ದ ಕೆಕೆಆರ್ ತಂಡದ ನಾಯಕ ಶ್ರೇಯಸ್ ಅಯ್ಯರ್ಗೆ ಬಿಸಿಸಿಐ ಬಿಗ್ ಶಾಕ್ ನೀಡಿದೆ. ಅದರಂತೆ ಅಯ್ಯರ್ ಮತ್ತೊಮ್ಮೆ ಈ ಲೋಪ ಎಸಗಿದರೆ ಪಂದ್ಯದಿಂದಲೇ ಹೊರಗುಳಿಯಬೇಕಾಗುತ್ತದೆ.
ವಾಸ್ತವವಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಈ ಪಂದ್ಯದಲ್ಲಿ ನಿಗದಿತ ಸಮಯಕ್ಕೆ ಓವರ್ ಮುಗಿಸದಿದ್ದಕ್ಕಾಗಿ ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ಗೆ ಪಂದ್ಯ ಶುಲ್ಕದಲ್ಲಿ 12 ಲಕ್ಷ ರೂಗಳನ್ನು ದಂಡವಾಗಿ ವಿಧಿಸಲಾಗಿದೆ.