ತುಮಕೂರು, ಆ.12 : ನೆರೆ ಸಂತ್ರಸ್ತರಿಗೆ ಸಿದ್ಧಗಂಗಾ ಶಿಕ್ಷಣ ಸಂಸ್ಥೆಯಿಂದ 25 ಲಕ್ಷ, ಸಿದ್ಧಗಂಗಾಮಠದವತಿಯಿಂದ 25 ಲಕ್ಷ ಸೇರಿದಂತೆ ಒಟ್ಟು 50 ಲಕ್ಷ ಮೊತ್ತ ಪರಿಹಾರ ನೀಡಲಾಗುತ್ತಿದೆ ಎಂದು ಸಿದ್ಧಗಂಗಾಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ಅವರು ಭಾನುವಾರ ಸಂಜೆ ಮಠದ ಅವರಣದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆ ವೇಳೆ ಸ್ವಾಮೀಜಿ ಈ ಪರಿಹಾರ ಮೊತ್ತದ ಬಗ್ಗೆ ಘೋಷಣೆ ಮಾಡಿದ್ದಾರೆ