ತುಮಕೂರು: ಇಂದು ತ್ರಿವಿಧ ದಾಸೋಹಿ ನಡೆದಾಡುವ ದೇವರು ಲಿಂಗೈಕ್ಯ ಶ್ರೀ ಶಿವಕುಮಾರ್ಶ್ರೀಗಳ 117 ನೇ ಜಯಂತಿ. ಶ್ರೀಗಳ 117ನೇ ಜನ್ಮದಿನ ಹಿನ್ನೆಲೆಯಲ್ಲಿ ಶ್ರೀಮಠಕ್ಕೆ ರಾಜಕೀಯ ನಾಯಕರು ಭೇಟಿ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶಿವಕುಮಾರ್ ಶ್ರೀಗಳ ಗದ್ದುಗೆಗೆ ನಮಸ್ಕರಿಸಿ ದರ್ಶನ ಪಡೆದರು. ಬಳಿಕ ಸಿದ್ದಲಿಂಗ ಶ್ರೀಗಳನ್ನು ಭೇಟಿಯಾಗಿ ಆಶಿರ್ವಾದ ಪಡೆದರು.
ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಸಿದ್ದಗಂಗಾ ಮಠಕ್ಕೆ ಆಗಮಿಸಿ ಶಿವಕುಮಾರ್ ಶ್ರೀಗಳ ಗದ್ದುಗೆ ದರ್ಶನ ಪಡೆದು ಪೂಜೆ ಸಲ್ಲಿಸಿದರು. ವಿ. ಸೋಮಣ್ಣ ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಅವರು ಕೂಡ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಗೃಹ ಸಚಿವ ಡಾ. ಜಿ ಪರಮೇಶ್ವರ್ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆ ದರ್ಶನ ಪಡೆದರು. ಬಳಿಕ ಸಿದ್ದಲಿಂಗ ಶ್ರೀಗಳನ್ನು ಭೇಟಿಯಾಗಿ ಆಶಿರ್ವಾದ ಪಡೆದರು.